ನೇತ್ರಾವತಿ ನದಿಗೆ ಬಿದ್ದು ಯುವಕ ಮೃತ್ಯು !

ಬಂಟ್ವಾಳ: ನೇತ್ರಾವತಿ ನದಿಗೆ ಬಿದ್ದು ಯುವಕ ಮೃತಪಟ್ಟ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಮಂಜೊಟ್ಟಿ ನಿವಾಸಿ ಲೋಹಿತಾಶ್ವ (30) ಮೃತ ಯುವಕ.

ಲೋಹಿತಾಶ್ವ ಅವರು ಕಾರಿನಲ್ಲಿ ಊರಿನ ನಾಲ್ವರು ಸ್ನೇಹಿತರ ಜೊತೆ ಶಂಭೂರಿಗೆ ಬಂದಿದ್ದು, ಸ್ನೇಹಿತರು ಸ್ನಾನ ಮಾಡುವುದಕ್ಕೆ ನೀರಿಗೆ ಇಳಿದಿದ್ದರು, ಆದರೆ ಲೋಹಿತಾಶ್ವ ನದಿ ಕಿನಾರೆಯಲ್ಲೇ ಕುಳಿತ್ತಿದ್ದರು ಎನ್ನಲಾಗಿದೆ. ಆದರೆ ಸ್ನೇಹಿತರು ಸ್ನಾನ ಮುಗಿಸಿ ಬರುವ ವೇಳೆ ಲೋಹಿತಾಶ್ವ ಅವರು ನೀರಿನಲ್ಲಿ ಬಿದ್ದಿದ್ದರು. ನದಿ ಕಿನಾರೆಯಲ್ಲಿ ಕುಳಿತಿದ್ದ ಅವರ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದು ನೀರಿಗೆ ಬಿದ್ದಿರುವ ಸಾಧ್ಯತೆಯ ಕುರಿತು ಸಂಶಯಿಸಲಾಗಿದ್ದು, ಕೈಯಲ್ಲಿ ವಾಚ್ ಇದ್ದು, ಬಟ್ಟೆಯನ್ನೂ ಧರಿಸಿದ್ದರು. ಅವರೂ ಸ್ನಾನಕ್ಕೆ ಇಳಿದಿದ್ದರೆ ಅದನ್ನು ಕಳಚಿರುತ್ತಿದ್ದರು. ಬಿದ್ದಿರುವ ರಭಸಕ್ಕೆ ಅವರ ತಲೆಯ ಭಾಗಕ್ಕೆ ಗಾಯವಾಗಿದೆ.





























 
 

ಲೋಹಿತಾಶ್ವ ಅವರು ಎಲೆಕ್ಟ್ರಿಕಲ್ ಗುತ್ತಿಗೆ ಕೆಲಸ ಮಾಡುತ್ತಿದ್ದು, ಅವರ ಸ್ನೇಹಿತರು ಲೋಹಿತಾಶ್ವ ಹಿಂದೆ ಕೆಲಸ ಮಾಡುತ್ತಿದ್ದ ವಿದ್ಯುತ್ ಗುತ್ತಿಗೆ ಸಂಸ್ಥೆಯಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದರು. ಸೋಮವಾರ ರಜೆ ಇದ್ದ ಹಿನ್ನೆಲೆಯಲ್ಲಿ ಸ್ನೇಹಿತನ ಪತ್ನಿಯ ಮನೆ ಶಂಭೂರಿನಲ್ಲಿದ್ದ ಹಿನ್ನೆಲೆ ಅಲ್ಲಿಗೆ ತೆರಳಿದ್ದರು ಎಂದು ವರದಿಯಾಗಿದೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top