ಪುತ್ತೂರು: .ಸಂತ ಫಿಲೋಮಿನಾ ಕಾಲೇಜಿನ ವಿಜ್ಞಾನ ವಿಭಾಗಗಳು, ಆಂತರಿಕ ಗುಣಮಟ್ಟ ಭರವಸೆ ಕೋಶ ಮತ್ತು ಇನ್ಸ್ಟಿಟ್ಯೂಶನ್ಸ್ ಇನ್ನೊವೇಶನ್ ಕೌನ್ಸಿಲ್ಗಳ ಸಂಯುಕ್ತ ಆಶ್ರಯದಲ್ಲಿ ವಿಜ್ಞಾನ ಸಂಘದ ಚಟುವಟಿಕೆಗಳ ಉದ್ಘಾಟನೆ ಮತ್ತು ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಕಾಲೇಜಿನ ಪ್ರಾಂಶುಪಾಲ ವಂ.ಡಾ. ಆಂಟೋನಿ ಪ್ರಕಾಶ್ ಮೊಂತೇರೊ ಅಧ್ಯಕ್ಷತೆ ವಹಿಸಿ, ವೈಜ್ಞಾನಿಕ ಮನೋಧರ್ಮವನ್ನು ಬೆಳೆಸಿಕೊಳ್ಳುವುದರ ಮಹತ್ವವನ್ನು ಒತ್ತಿಹೇಳಿದರು, ವಿದ್ಯಾರ್ಥಿಗಳು ಆಸಕ್ತಿ ಮತ್ತು ಸಮರ್ಪಣಾ ಮನೋಭಾವದಿಂದ ವಿಷಯವನ್ನು ಅಧ್ಯಯನ ಮಾಡಲು ಮತ್ತು ಆ ಮೂಲಕ ಸದುಪಯೋಗಪಡಿಸಿಕೊಳ್ಳಲು ಪ್ರೋತ್ಸಾಹಿಸಿದರು. ಅವರು ತಮ್ಮ ಸುತ್ತಲಿನ ಪ್ರಪಂಚಕ್ಕೆ ಜ್ಞಾನ ಮತ್ತು ಸೂಕ್ಷ್ಮತೆಯ ಪರಿಣಾಮಕಾರಿ ಸಂವಹನದ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದರು..
ಕ್ಯಾಂಪಸ್ ನಿರ್ದೇಶಕ ವಂ. ಸ್ಟ್ಯಾನಿ ಪಿಂಟೋ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕಾಲೇಜಿನ ಹಿರಿಯ ವಿದ್ಯಾರ್ಥಿ, ಬೆಂಗಳೂರಿನ ಸಿಎಸ್ ಐ ಆರ್-ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ ನ ಮೆಟೀರಿಯಲ್ ಸೈನ್ಸ್ ವಿಭಾಗದ ವಿಶ್ರಾಂತ ವಿಜ್ಞಾನಿ ಡಾ. ಆರ್. ರಾಮಚಂದ್ರ ರಾವ್ ಗೌರವ ಅತಿಥಿಯಾಗಿ ಭಾಗವಹಿಸಿದ್ದರು.
ಕ್ಯಾಂಪಸ್ ನಿರ್ದೇಶಕರಾದ ವಂ|ಸ್ಟಾನಿಪಿಂಟೋ ಅವರು ವಿದ್ಯಾರ್ಥಿಗಳಿಗೆ ವಿಜ್ಞಾನ ಕ್ಷೇತ್ರದಲ್ಲಿನ ವಿಶಾಲ ಅವಕಾಶಗಳ ಬಗ್ಗೆ ತಿಳಿಹೇಳಿದರು, ಅವರ ಭವಿಷ್ಯಕ್ಕಾಗಿ ಅದರ ಮಹತ್ವವನ್ನು ಒತ್ತಿ ಹೇಳಿದರು. ಶಿಲ್ಪಾ ಮತ್ತು ಬಳಗ ಪ್ರಾರ್ಥಿಸಿದರು. ಕಾಲೇಜಿನ ವಿಜ್ಞಾನ ವೇದಿಕೆ ಅಧ್ಯಕ್ಷ ವಿನೀತ್ ಲೋಬೋ ಸ್ವಾಗತಿಸಿದರು. ಉಪಾಧ್ಯಕ್ಷ ಅಂಜುಂ ನಿಹಾಲ ವಂದಿಸಿದರು. ವಿಜ್ಞಾನ ವೇದಿಕೆ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭವನ್ನು ವಿಜ್ಞಾನ ವಿಭಾಗದ ಡೀನ್ ಡಾ| ಮಾಲಿನಿ ಕೆ. ನಡೆಸಿಕೊಟ್ಟರು. ಸಮೀಯಾ ಬಾನು ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಉಪ-ಪ್ರಾಂಶುಪಾಲರುಗಳಾದ ಡಾ| ಪಿ ಎಸ್ ಕೃಷ್ಣ ಕುಮಾರ್, ಡಾ. ವಿಜಯ ಕುಮಾರ್ ಎಂ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿಜ್ಞಾನ ವಿಭಾಗಗಳ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು