ದ,ಕ,ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಬೆಳ್ತಂಗಡಿ ಭೇಟಿ | ಹಿರಿಯ ಬಿಜೆಪಿ ಮುಖಂಡರನ್ನು ಭೇಟಿಯಾಗಿ ಮಾರ್ಗದರ್ಶನ ಪಡೆದ ಚೌಟ

ಬೆಳ್ತಂಗಡಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು, ಇವತ್ತಿನ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪ್ರವಾಸದ ಸಂದರ್ಭದಲ್ಲಿ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ನಂತರ ಹೊಸಂಗಡಿ ಪಡ್ಯಾರಬೆಟ್ಟು ಕೊಡಮಣಿತ್ತಾಯ ದೈವಸ್ಥಾನಕ್ಕೆ ಭೇಟಿ ನೀಡಿ, ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ‌ ಅವರೊಂದಿಗಿದ್ದರು.

ಬೆಳ್ತಂಗಡಿ ಮಂಡಲದ ನಾರಾವಿ ಮತ್ತು ಅಳದಂಗಡಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ, ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲ, ಸಾಮಾಜಿಕ ಮತ್ತು ಧಾರ್ಮಿಕ ಮುಂದಾಳು ವಸಂತ್ ಸಾಲಿಯಾನ್ ಕಾಪಿನಾಡ್ಕ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸಂತೋಷ್ ಕಾಪಿನಡ್ಕ ಅವರನ್ನು ಭೇಟಿಯಾಗಿ ಮಾರ್ಗದರ್ಶನ ಪಡೆದರು.





























 
 

ತುಳುನಾಡಿನ ಹೆಮ್ಮೆಯ ಯೋಧ ಕೆದಂಬಾಡಿ ರಾಮಯ್ಯ ಗೌಡ ಶೌರ್ಯ ಪ್ರಶಸ್ತಿ ಪುರಸ್ಕೃತ ಬೆಳ್ತಂಗಡಿಯ ಸುಬೇದಾರ್ ಏಕನಾಥ್ ಶೆಟ್ಟಿ ಅವರ ಸ್ಮಾರಕಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದರು. ಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ನಮ್ಮ ಪಾರ್ಟಿಯ ಹಿರಿಯರಾದ ಕೆ. ಪ್ರಭಾಕರ ಬಂಗೇರ ಅವರನ್ನು ಭೇಟಿಯಾಗಿ ಮಾರ್ಗದರ್ಶನ ಪಡೆದರು.

ಬಳಿಕ ಕುತ್ಯಾರು ಶ್ರೀ‌ ಸೋಮನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು. ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಕುವೆಟ್ಟು ಮತ್ತು ಕಣಿಯೂರು ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ ಸಿಂಹನಾಯಕ್‌ ಅವರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top