ಕೂಜಿಮಲೆ ನಕ್ಸಲರ ತಂಡ ಭೇಟಿ ಮಾಸುವ ಮುನ್ನ ಮತ್ತೆ ಐನೆಕಿದು ಭೇಟಿ ನೀಡಿದ ತಂಡ

ಸುಬ್ರಹ್ಮಣ್ಯ: ಮೂರು ದಿನಗಳ ಹಿಂದೆ ದಕ್ಷಿಣ ಕನ್ನಡ- ಕೊಡಗು ಗಡಿ ಭಾಗದ ಕೂಜಿಮಲೆಯ ಎಸ್ಟೇಟ್‌ ಅಂಗಡಿಗೆ ನಕ್ಸಲರು ಭೇಟಿ ನೀಡಿದ ಬೆನ್ನಲ್ಲೇ ಶನಿವಾರ ಮತ್ತೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಶಂಕಿತ ನಕ್ಸಲರು ಭೇಟಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಶನಿವಾರ ಸಂಜೆ 6 ಗಂಟೆ ಸಮಯಕ್ಕೆ ಶಂಕಿತರ ತಂಡ ಐನೆಕಿದು ಗ್ರಾಮದ ಅರಣ್ಯದಂಚಿನ ತೋಟದ ಮೂಲಕ ಆಗಮಿಸಿತ್ತು. ತೋಟದಲ್ಲಿದ್ದ ಕೆಲಸದವರ ಶೆಡ್‌ಗೆ ಭೇಟಿ ನೀಡಿದ ವೇಳೆ ಕೆಲಸದಾಳು ಶೆಡ್‌ನ‌ ಬಾಗಿಲು ಹಾಕಿದ್ದು, ಬಳಿಕ ಶಂಕಿತರ ತಂಡ ಅಲ್ಲೇ ಪಕ್ಕದಲ್ಲಿರುವ ತೋಟದ ಮಾಲಕರ ಮನೆಗೆ ತೆರಳಿ ಒಳಹೊಕ್ಕಿತ್ತು. ಮನೆಯವರ ಜತೆ ಸುಮಾರು ಒಂದು ತಾಸಿಗೂ ಅಧಿಕ ಕಾಲ ಮಾತುಕತೆ ನಡೆಸಿತ್ತು ಎನ್ನಲಾಗಿದೆ.

ಕಳೆದ ವಾರ ನಕ್ಸಲರ ತಂಡ ಭೇಟಿ ನೀಡಿದಾಗ ನಕ್ಸಲ್ ನಿಗ್ರಹದಳ ಎಲರ್ಟ್‍ ಆದರೂ ನಕ್ಸಲರು ಎಎನ್‌ಎಫ್ ತಂಡಕ್ಕೆ ಕಾಣಿಸಿರಲಿಲ್ಲ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top