ಅಕ್ರಮ ಗೋವು ಸಾಗಾಟ | ಕಾರು ಬಿಟ್ಟು ಆರೋಪಿಗಳು ಪರಾರಿ

ಪುತ್ತೂರು: ಅಕ್ರಮ ದನ ಸಾಗಾಟ ಮಾಡುತ್ತಿದ್ದ ಕಾರನ್ನು ಬಜರಂಗದಳ ಕಾರ್ಯಕರ್ತರು ತಡೆದು ನಿಲ್ಲಿಸಿದಾಗ ಕಾರಿನಲ್ಲಿದ್ದವರು ಕಾರು ಬಿಟ್ಟು ಪರಾರಿಯಾದ ಘಟನೆ ಕಬಕ ಕಲ್ಲಂದಡ್ಕ ದಲ್ಲಿ ನಡೆದಿದೆ.

ಕಾರಿನಲ್ಲಿ ನಾಲ್ಕು ಗೋವುಗಳು ಪತ್ತೆಯಾಗಿದ್ದು, ಕಾರು ಚಾಲಕ ಹಾಗೂ ಕಾರಿನಲ್ಲಿದ್ದವರು ಕಾರು ಹಾಗೂ ಗೋವುಗಳನ್ನು ಬಿಟ್ಟು ಪರಾರಿಯಾಗಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ.

ಬಜರಂಗದಳ ಕಬಕದ ಕಾರ್ಯಕರ್ತರು ಕಾರನ್ನು ತಡೆಯಲು ಪ್ರಯತ್ನಿಸಿದಾಗ ಕಾರಿನ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದು ಜಖಂಗೊಂಡಿದೆ ಎಂದು ಹೇಳಲಾಗಿದೆ. ಕಾರಿನಲ್ಲಿ ಎರಡು ದನ ಹಾಗೂ ಎರಡು ಕರು ಪತ್ತೆಯಾಗಿದೆ. ಅದರ ಕೈ ಕಾಲುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಲಾಗಿತ್ತು ಎನ್ನಲಾಗಿದೆ.





























 
 

ಪುತ್ತೂರು ನಗರ ಠಾಣಾ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಬಂದು ನಾಲ್ಕು ಗೋವುಗಳನ್ನು ಮತ್ತು ಜಖಂಗೊಂಡ ವಾಹನವನ್ನು ಪುತ್ತೂರು ನಗರ ಠಾಣೆಗೆ ಸಾಗಿಸಿದರು. ಗೋವುಗಳಿಗೆ ನೀರು ಮತ್ತು ಮೇವಿನ ವ್ಯವಸ್ತೆಯನ್ನು ಬಜರಂಗದಳದ ಕಾರ್ಯಕರ್ತರ ವ್ಯವಸ್ಥೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top