ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷರಾಗಿ ಮಹೇಶ್ ಪುಚ್ಚಪ್ಪಾಡಿ,  ಕಾರ್ಯದರ್ಶಿಯಾಗಿ ವೆಂಕಟಗಿರೀಶ್ ಸಿ.ಜಿ

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ನೂತನ ಅಧ್ಯಕ್ಷರಾಗಿ ಗುತ್ತಿಗಾರು ಕಮಿಲದ ಮಹೇಶ್ ಪುಚ್ಚಪ್ಪಾಡಿ ಹಾಗೂ ಕಾರ್ಯದರ್ಶಿಯಾಗಿ ಕೋಡಪದವು ಕೆಲಿಂಜದ ವೆಂಕಟಗಿರೀಶ್ ಸಿ.ಜಿ. ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ನಡೆದ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ಶಂ. ನಾ. ಖಂಡಿಗೆ ಪೆರ್ಲ, ಎಂ.ಡಿ. ವಿಜಯಕುಮಾರ್ ಮಡಪ್ಪಾಡಿ ಹಾಗೂ ಜತೆ ಕಾರ್ಯದರ್ಶಿಯಾಗಿ ಸಾಯಿಶೇಖರ್ ಕರಿಕಳ ಪಂಜ ಆಯ್ಕೆಯಾದರು.

ಸಂಘದ ನಿಕಟಪೂರ್ವ ಅಧ್ಯಕ್ಷ ಅಶೋಕ್ ಕಿನಿಲ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.





























 
 

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು 1965 ರಲ್ಲಿ ಸ್ಥಾಪನೆಯಾದ ಸಂಸ್ಥೆಯಾಗಿದೆ. ವಿವಿಧ ಸಂದರ್ಭಗಳಲ್ಲಿ ಅಡಿಕೆ ಬೆಳೆಗಾರರ ಪರವಾಗಿ ಸಂಘವು ಧ್ವನಿ ಎತ್ತಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top