ಆಕ್ಸಿಜನ್ ಕೊರತೆ : ಬಾವಿಗೆ ಇಳಿದಿದ್ದ ಇಬ್ಬರು ಕಾರ್ಮಿಕರು ಮೃತ್ಯು

ಕೇಪು: ಆಕ್ಸಿಜನ್ ಸಿಗದೆ ಬಾವಿಗೆ ರಿಂಗ್ ಹಾಕಲು ಇಳಿದಿದ್ದ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ಇಂದು ನಡೆದಿದೆ.

ಪ್ರಸ್ತುತ ಪರ್ತಿಪ್ಪಾಡಿಯಲ್ಲಿ ವಾಸವಿರುವ ಇಬ್ಬು ಯಾನೆ ಇಬ್ರಾಹಿಂ (40) ಮತ್ತು ಮಲಾರ್ ನಿವಾಸಿ ಆಲಿ(24) ಮೃತಪಟ್ಟ ಕಾರ್ಮಿಕರು.

ಸುಮಾರು 30 ಫೀಟ್ ಆಳದ ಬಾವಿಗೆ ರಿಂಗ್ ಹಾಕಿ ನಂತರ ಕ್ಲೀನಿಂಗ್ ಮಾಡಲೆಂದು ಬಾವಿಗೆ ಇಳಿದ ಒಬ್ಬ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದು, ಬಾವಿಗೆ ಇಳಿದವನು ಮೇಲಕ್ಕೆ ಬಾರದೇ ಇದ್ದಾಗ ಅವನನ್ನು ನೋಡಲು ಇನ್ನೊಬ್ಬ ಕಾರ್ಮಿಕ ಇಳಿದಿದ್ದ. ಇಬ್ಬರೂ ಆಕ್ಸಿಜನ್ ಸಿಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

 
 



























ಬಳಿಕ ಸ್ಥಳಿಯರ ಸಹಾಯದಿಂದ ಫ್ರೆಂಡ್ಸ್ ವಿಟ್ಲ ಮುರಳೀಧರ ರವರು ಎರಡು ಶವಗಳನ್ನು ಮೇಲಕ್ಕೆತ್ತಿದ್ದಾರೆ. ಮೃತದೇಹಗಳನ್ನು ವಿಟ್ಲ ಸಮುದಾಯ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಇಬ್ರಾಹಿಂ ಎನ್ನುವವರು ಕಳೆದ ಇಪ್ಪತ್ತು ವರ್ಷದಿಂದ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top