ಬಲ್ನಾಡು ಶ್ರೀ ದಂಡನಾಯಕ-ಉಳ್ಳಾಲ್ತಿ, ದೈವಗಳ ನೇಮ ನಡಾವಳಿ | ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತ ಭಕ್ತಾದಿಗಳಿಂದ ಮಲ್ಲಿಗೆ, ಪಟ್ಟೆಸೀರೆ ಅರ್ಪಣೆ

ಪುತ್ತೂರು: ಬಲ್ನಾಡು ಶ್ರೀ ದಂಡನಾಯಕ- ಉಳ್ಳಾಲ್ತಿ, ಹಾಗೂ ಪರಿವಾರ ದೈವಗಳ ನೇಮ ನಡಾವಳಿ ಏ.28 ಭಾನುವಾರ ನಡೆಯಿತು.

ಶನಿವಾರ ರಾತ್ರಿ ಗಂಟೆ 7 ರಿಂದ ಶ್ರೀ ದೈವಗಳ ಭಂಡಾರ ತೆಗೆದು ಬಳಿಕ ತಂಬಿಲಾದಿಗಳು ಜರಗಿತು. ನಂತರ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ಏ.28 ಭಾನುವಾರ ಮುಂಜಾನೆಯಿಂದಲೇ ಸಹಸ್ರಾರು ಭಕ್ತಾದಿಗಳು ಸರತಿ ಸಾಲಿನಲ್ಲಿ ನಿಂತು ಮಲ್ಲಿಗೆ ಪ್ರಿಯೆ ಉ:ಳ್ಳಾಲ್ತಿ ಅಮ್ಮನವರಿಗೆ ಮಲ್ಲಿಗೆ, ಪಟ್ಟೆ ಸೀರೆಗಳನ್ನು ಸಮರ್ಪಿಸಿದರು.





























 
 

ಬೆಳಿಗ್ಗೆ 6 ರಿಂದ ಶ್ರೀ ದಂಡನಾಯಕ ದೈವದ ವಾಲಸರಿ ನೇಮ ನಡೆದು ಬಳಿಕ ಶ್ರೀ ಉಳ್ಳಾಲ್ತಿ ನೇಮ ನಡೆಯಿತು. ಮಧ್ಯಾಹ್ನ ಗಂಟೆ 12 :30 ರಿಂದ ಅನ್ನಸಂತರ್ಪಣೆ ಜರಗಿತು. ಬಳಿಕ  2 :00 ರಿಂದ ಶ್ರೀ ಕಾಳರಾಹು ಮತ್ತು ಶ್ರೀ ಮಲರಾಯ ದೈವಗಳ ನೇಮ ನಡೆಯಿತು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top