ಶೀಘ್ರ ವೇತನಕ್ಕೆ ಆಗ್ರಹ : ಅಂಗನವಾಡಿ ಕಾರ್ಯಕರ್ತೆಯರಿಂದ ಶಾಸಕರಿಗೆ ಮನವಿ

ಪುತ್ತೂರು: ಕಳೆದ ಎರಡು ತಿಂಗಳ ವೇತನ ವಿಳಂಬವಾಗಿದ್ದು ಶೀಘ್ರ ವೇತನಕ್ಕೆ ಆಗ್ರಹಿಸಿ ಪುತ್ತೂರು ತಾಲೂಕು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘದ ವತಿಯಿಂದ ಶಾಸಕರಾದ ಅಶೋಕ್ ರೈ ಅವರಿಗೆ ಮನವಿ ಮಾಡಿದರು.

ಮನವಿಗೆ ಸ್ಪಂದಿಸಿದ ಶಾಸಕರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗೆ ಕರೆ ಮಾಡಿ ವಾರದೊಳಗೆ ವೇತನ ಪಾವತಿಸುವಂತೆ ಮತ್ತು ವಿಳಂಬವಾಗದಂತೆ ನೋಡಿಕೊಳ್ಳುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘದ ಅಧ್ಯಕ್ಷರಾದ ಕಮಲ,ಕಾರ್ಯದರ್ಶಿ ಪುಷ್ಪಲತಾ ,ಖಜಾಂಜಿ ಶೈಲಾಜ, ಉಪಾಧ್ಯಕ್ಷರಾದ ಸಂಧ್ಯ ,ಮಾಜಿ ಜಿಲ್ಲಾಧ್ಯಕ್ಷರಾದ ಅರುಣ.ಡಿ ಮಾಜಿ ಕಾರ್ಯದರ್ಶಿ ಜಯಲತ ಉಪಸ್ಥಿತರಿದ್ದರು.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top