ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸಂಘದಿಂದ ತಾಳಮದ್ದಳೆ | ಅಗಲಿದ ಕಲಾವಿದರಿಗೆ ನುಡಿನಮನ

ಉಪ್ಪಿನಂಗಡಿ: ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷಾಚರಣೆಯ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ ದ್ಯೂತ  ಪ್ರಕರಣ ತಾಳಮದ್ದಳೆ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ಜರಗಿತು.

ಭಾಗವತರಾಗಿ ಪದ್ಮನಾಭ ಕುಲಾಲ್ ಇಳಂತಿಲ, ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಬಿ. ಸುರೇಶ್ ರಾವ್, ಹಿಮ್ಮೇಳದಲ್ಲಿ ದಿವಾಕರ ಆಚಾರ್ಯ ನೇರೆಂಕಿ, ಶ್ರೀಪತಿ ಭಟ್ ಉಪ್ಪಿನಂಗಡಿ, ಗುರುಮೂರ್ತಿ ಅಮ್ಮಣ್ಣಾಯ, ಅರ್ಥಧಾರಿಗಳಾಗಿ ಜಯರಾಮ ಬಲ್ಯ ( ಕೌರವ) ಮಹಾಲಿಂಗೇಶ್ವರ ಭಟ್ ಪೆರಿಯಡ್ಕ (ಕರ್ಣ )ಸತೀಶ್ ಆಚಾರ್ಯ ಮಾಣಿ (ಶಕುನಿ) ಶ್ರೀಮತಿ ಶ್ರುತಿ ವಿಸ್ಮಿತ(ವಿದುರ )ಶ್ರೀಧರ  ಎಸ್.ಪಿ ಮಂಗಳೂರು (ಧರ್ಮರಾಯ) ದಿವಾಕರ ಆಚಾರ್ಯ ಗೇರುಕಟ್ಟೆ (ಧೃತರಾಷ್ಟ್ರ ಮತ್ತು ಭೀಮ) ಭಾಗವಹಿಸಿದ್ದರು. ಗಣೇಶ್ ಆಚಾರ್ಯ. ಕೆ ಬೆಂಗಳೂರು ಕಾರ್ಯಕ್ರಮದ ಪ್ರಾಯೋಜಕರಾಗಿದ್ದರು.

ನುಡಿನಮನ:





























 
 

ಇತ್ತೀಚೆಗೆ ನಿಧನರಾದ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಮತ್ತು ವೇಷಧಾರಿ ಗಂಗಾಧರ ಪುತ್ತೂರು ಅವರಿಗೆ ಸತೀಶ್ ಆಚಾರ್ಯ ಮಾಣಿ ಮತ್ತು ಮಹಾಲಿಂಗೇಶ್ವರ ಭಟ್ ಪೆರಿಯಡ್ಕ ನುಡಿ ನಮನ ಸಲ್ಲಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top