ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಬಂಧನ ನಿರ್ಧಾರ ಕೈ ಬಿಟ್ಟ ಪೊಲೀಸರು | ಸರಕಾರಕ್ಕೆ ನಡುಕ ಹುಟ್ಟಿಸಿದ ಕಾರ್ಯಕರ್ತರ ದಂಡು

ಬೆಳ್ತಂಗಡಿ: ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣ ಸಂಬಂಧಿಸಿದಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ಪ್ರಕರಣ ದಾಖಲಾಗಿದ್ದು, ಅವರನ್ನು ಬಂಧಿಸುವ ನಿಟ್ಟಿನಲ್ಲಿ ಪೊಲೀಸರು ಇಂದು ಪೂಂಜಾ ಅವರ ಮನೆಗೆ ತೆರಳಿದ್ದು, ಇದೀಗ ಹರೀಶ್ ಪೂಂಜಾ ಅವರ ಬಂಧನದ ನಿರ್ಧಾರವನ್ನು ಕೈಬಿಟ್ಟಿದ್ದಾರೆ.

ಹರೀಶ್ ಪೂಂಜ ಬಂಧನ ಸಾಧ್ಯತೆಯ ಹಿನ್ನಲೆಯಲ್ಲಿ ಅವರ ನಿವಾಸಕ್ಕೆ ವಕೀಲರ ತಂಡ ಇಂದು ಭೇಟಿ ನೀಡಿದೆ. ಈ ಸಂದರ್ಭದಲ್ಲಿ ವಕೀಲರ ತಂಡ ಪೊಲೀಸರ ಜೊತೆ ಮಾತುಕತೆ ನೆಡೆಸಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ ಅವರ ನಿವಾಸ ಎದುರು ಇಂದು ನೂರಾರು ಬಿಜೆಪಿ ಕಾರ್ಯಕರ್ತರು ಜಮಾಯಿಸಿದ್ದು, ಯಾವುದೇ ಕಾರಣಕ್ಕೂ ಬಂಧಿಸದಂತೆ ತಡೆ ಹಿಡಿದಿದ್ದಾರೆ ಎಂದು ತಿಳಿದು ಬಂದಿದೆ.

ಇದೀಗ ಪೂಂಜಾ ಅವರನ್ನು ಬಂಧಿಸುವ ನಿರ್ಧಾರದಿಂದ ಹಿಂದೆ ಸರಿದಿದ್ದು, ಸರಕಾರಕ್ಕೆ ನಡುಕ ಹುಟ್ಟಿಸಲಾಗಿದೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top