ಕಳ್ಳತನ : ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

ಮಂಗಳೂರು : ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕಂಕನಾಡಿ ನಗರ ಠಾಣಾ ಪೊಲೀಸರ ತಂಡ ಇಬ್ಬರು ಅಂತರ್ ರಾಜ್ಯ ಕಳ್ಳರನ್ನು ಬಂಧಿಸಿದೆ.

ಕೊಡಗು ಜಿಲ್ಲೆ ವೀರಾಜಪೇಟೆ ಬೆಳ್ಳುರು ಗ್ರಾಮ ನಿವಾಸಿ ಸಚಿನ್ ಮತ್ತು ಕೊಡಗು ಜಿಲ್ಲೆ ಬಾಡಗಾ ಗ್ರಾಮ ನಿವಾಸಿ ನಿಶಾಂತ್ ಬಂಧಿತ ಆರೋಪಿಗಳು.

ಮಂಗಳೂರು ನಗರದ ಕುಲಶೇಖರ ದ.ಕ ಸಹಕಾರಿ ಹಾಲು ಒಕ್ಕೂಟದ ಬಳಿಯ ಮನೆಗೆ ನುಗ್ಗಿದ ಕಳ್ಳರು ಮನೆಯಲ್ಲಿದ್ದ 87.5 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ 4,29,500 ರೂ. ಮೌಲ್ಯದ ಚಿನ್ನಾಭರಣ, ಕೃತ್ಯಕ್ಕೆ ಉಪಯೋಗಿಸಿದ 7 ಲಕ್ಷ ರೂ. ಮೌಲ್ಯದ ಕಾರು ಸೇರಿ 11.30 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.









https://screenapp.io/app/#/shared/8P4BcrrHNx























 
 

ಆರೋಪಿಗಳ ಪೈಕಿ ಸಚಿನ್ ವಿರುದ್ಧ ಕೊಡಗು ಜಿಲ್ಲೆಯ ಗೋಣಿಕೊಪ್ಪಲು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣದ ಹಾಗೂ ನಿಶಾಂತ್ ವಿರುದ್ಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top