ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್‍ ಜಿ.ವಿ. ಜವಾಬ್ದಾರಿ ಬದಲಾವಣೆ

ಉಡುಪಿ : ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ. ಅವರ ಜವಾಬ್ದಾರಿಯನ್ನು ಬದಲಾವಣೆ ಮಾಡಿ ಆರ್‍ ಎಸ್‍ ಎಸ್ ಘೋಷಣೆ ಮಾಡಿದೆ.

ಮೂಲತಃ  ದಕ್ಷಿಣ ಕನ್ನಡ ಜಿಲ್ಲೆಯ ಕುಂತೂರಿನವರಾದ ರಾಜೇಶ್ ಬಾಲ್ಯದಲ್ಲೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜವಾಬ್ದಾರಿ ವಹಿಸಿಕೊಂಡು, ತಮ್ಮನ್ನು ತೊಡಗಿಸಿಕೊಂಡವರು ಅನೇಕ ಜಿಲ್ಲೆ, ವಿಭಾಗಗಳಲ್ಲಿ ಹಾಗೂ ಪ್ರಾಂತದ ಪ್ರಚಾರಕರಾಗಿ ಜವಾಬ್ದಾರಿ ನಿರ್ವಹಣೆ ಮಾಡಿದ್ದಾರೆ.

ಹೆಬ್ರಿಯಲ್ಲಿ ನಡೆಯುತ್ತಿರುವ ಆರ್.ಎಸ್.ಎಸ್. ವರ್ಗದಲ್ಲಿ ಅನೇಕರ ಜವಾಬ್ದಾರಿಗಳು ಬದಲಾವಣೆಯಾಗಿದ್ದು, ಅದರಂತೆ ರಾಜೇಶ್ ಅವರನ್ನು ಬದಲಾವಣೆ ಮಾಡಿದೆ. ಕಳದ ಕೆಲವು ವರ್ಷಗಳಿಂದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿದ್ದ ರಾಜೇಶ್ ಅವರನ್ನು ಪ್ರಾಂತ ಸಮರಸ್ಯದ ಸಹ ಸಂಯೋಜಕರಾಗಿ ಘೋಷಣೆ ಮಾಡಿದೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top