ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ !

ನೆಲ್ಯಾಡಿ: ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಯೊಬ್ಬರ ಮೃತದೇಹ ಕೊಕ್ಕಡ ಗ್ರಾಮದ ಹಿತ್ತಿಲು ಸಮೀಪದ ಗೇರು ಗುಡ್ಡೆಯಲ್ಲಿ ಪತ್ತೆಯಾದ ಘಟನೆ ನಡೆದಿದೆ.

ಮೃತರು ಬೆಂಗಳೂರಿನಿಂದ-ಹಾಸನ, ಹಾಸನದಿಂದ-ಕೊಕ್ಕಡಕ್ಕೆ ಮೇ.24ರಂದು ಬಸ್ಸಿನಲ್ಲಿ ಪ್ರಯಾಣಿಸಿರುವ ಟಿಕೆಟ್ ಹಾಗೂ ಬ್ಯಾಂಕ್ ಎಟಿಎಂ ಕಾರ್ಡ್ ದೊರೆತಿದ್ದು ಅದರಲ್ಲಿ ನಿಂಗಣ್ಣ ಎಂದು ಹೆಸರು ನಮೂದಿಸಲಾಗಿದೆ.

ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟ‌ರ್ ಸಮರ್ಥ ಗಾಣಿಗ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಅರಸಿನಮಕ್ಕಿ ಹಾಗೂ ಶಿಶಿಲ ಶೌರ್ಯ ಘಟಕದ ತಂಡದ ಸದಸ್ಯರ ಸಹಕಾರದಿಂದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಳೂರಿನ ದೇರಳಕಟ್ಟೆ ಆಸ್ಪತ್ರೆಗೆ ಕೊಂಡೊಯ್ಯಲಾಯಿತು ಎನ್ನಲಾಗಿದೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top