ವಿಶ್ವವಿದ್ಯಾನಿಲಯ ಪರೀಕ್ಷೆಯಲ್ಲಿ ವಿವೇಕಾನಂದ ಕಾಲೇಜಿಗೆ ರ್‍ಯಾಂಕ್

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ 2022-23ನೇ ಸಾಲಿನ ಪದವಿ ಪರೀಕ್ಷೆಗಳಲ್ಲಿ ವಿವೇಕಾನಂದ ಪದವಿ ಕಾಲೇಜಿಗೆ ಮೂರು ರ್‍ಯಾಂಕ್‌ಗಳು ಲಭ್ಯವಾಗಿವೆ.

ಬಿಎಸ್ಸಿ ಪರೀಕ್ಷೆಯಲ್ಲಿ ಪಿಎಂಸಿ ವಿಭಾಗದಲ್ಲಿ ಶರಧಿ ಎಸ್.ಕೆ 4200 ರಲ್ಲಿ 4087  ಅಂಕ ಪಡೆದು ಐದನೇಯ ರ್‍ಯಾಂಕ್ ಪಡೆದುಕೊಂಡಿದ್ದಾರೆ. ಇವರು ವಿಟ್ಲದ ಕೇಶವಯ್ಯ ಎಸ್ ಹಾಗೂ ಶಶಿಕಲಾ ದಂಪತಿ ಪುತ್ರಿ.

ಕಲಾ ವಿಭಾಗದ ಎಚ್‌ ಇಪಿ ವಿಭಾಗದಲ್ಲಿ ಸೃಜನಿ ಎಸ್.ಆರ್.  3748 ಅಂಕ ಪಡೆದು ಐದನೇಯ ರ್‍ಯಾಂಕ ಪಡೆದಿದ್ದಾರೆ. ಅವರು ಕಡಬದ ರಾಮಚಂದ್ರ ಹಾಗೂ ಭವಾನಿ ದಂಪತಿ ಪುತ್ರಿ. ಕಲಾ ವಿಭಾಗದ ಪರೀಕ್ಷೆಯಲ್ಲಿ ಎಚ್‌ ಇಪಿ ಯ ಇನ್ನೋರ್ವ ವಿದ್ಯಾರ್ಥಿ ವೀರೇಶ 3726 ಅಂಕ ಪಡೆದು ಒಂಭತ್ತನೆ ರ್‍ಯಾಂಕನ್ನು ಗಳಿಸಿದ್ದಾರೆ. ಇವರು ರಾಯಚೂರಿನ ಮಾನ್ವಿ ತಾಲೂಕಿನ ನಾರಾಯಣಪ್ಪ ಹಾಗೂ ಹನುಮಂತಿ ದಂಪತಿ ಪುತ್ರ.





























 
 

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top