ಎಸ್‍ ಎಸ್‍ ಎಲ್‍ ಸಿಯಲ್ಲಿ 600 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಯುವವಾಹಿನಿ ಪುತ್ತೂರು ಘಟಕದ ವತಿಯಿಂದ ಅಭಿನಂದನೆ

ಪುತ್ತೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕದ ವತಿಯಿಂದ 2023-24 ನೇ ಸಾಲಿನಲ್ಲಿ 625ಕ್ಕೆ 600ಕ್ಕಿಂತ ಅಧಿಕ ಅಂಕಗಳಿಸಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಪುತ್ತೂರು ತಾಲೂಕಿನ ಬಿಲ್ಲವ ಗ್ರಾಮ ಸಮಿತಿಗಳ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮ ಅಂಗವಾಗಿ ಆಯಾಯ ವಿದ್ಯಾರ್ಥಿಗಳ ಮನೆಗಳಿಗೆ ತೆರಳಿ ಅಭಿನಂದನೆ ಸಲ್ಲಿಸುವ ಮೂಲಕ ವಿಶಿಷ್ಟವಾಗಿ ನಡೆಯಿತು.

ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಬಿಲ್ಲವ ಗ್ರಾಮ ಸಮಿತಿ ಶಾಂತಿಗೋಡಿನ ಪರಕಮೆ ನಿವಾಸಿಗಳಾದ ಸತೀಶ್ ಪೂಜಾರಿ ಪರಕಮೆ ಹಾಗೂ ರೂಪಲತಾ ಸತೀಶ್ ದಂಪತಿಯ ಪುತ್ರ ಮೋಕ್ಷಿತ್ ಪಿ. ಎಸ್ 614 ಅಂಕ, ಕೆದಂಬಾಡಿ ಗ್ರಾಮ ಸಮಿತಿಯ ನಾರಾಯಣ ಪೂಜಾರಿ ಕುರಿಕ್ಕಾರ ಹಾಗೂ ದಿವ್ಯ ದಂಪತಿ ಪುತ್ರಿ ಸನ್ನಿಧಿ 610 ಅಂಕ, ಒಳಮೊಗ್ರು ಗ್ರಾಮಸಮಿತಿ ಸತೀಶ್ ಪೂಜಾರಿ ಹಾಗೂ ದಿವ್ಯಜ್ಯೋತಿ ದಂಪತಿ ಪುತ್ರಿ ಸೃಷ್ಟಿ 608 ಅಂಕಗಳನ್ನು ಗಳಿಸಿದ್ದು ಅವರುಗಳನ್ನು ಸ್ವಗೃಹದಲ್ಲಿ ಹೆತ್ತವರು ಹಾಗೂ ಮನೆಯ ಹಿರಿಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.

ಯುವ ವಾಹಿನಿ ಪುತ್ತೂರು ಘಟಕದ ಅಧ್ಯಕ್ಷ ಜಯರಾಮ್ ಬಿ.ಎನ್. ಈ ಸಂದರ್ಭದಲ್ಲಿ ಮಾತನಾಡಿ, ಅಧಿಕ ಅಂಕಗಳಿಸಿ ನಮ್ಮ ಸಮಾಜಕ್ಕೆ ಒಳ್ಳೆಯ ಹೆಸರು ತಂದು ಕೊಟ್ಟ ವಿದ್ಯಾರ್ಥಿಗಳು ಅವರ ವಿದ್ಯಾಸಾಧನೆಯು ಉತ್ತಮ ರೀತಿಯಲ್ಲಿ ಸಾಗಿ ಭವಿಷ್ಯದಲ್ಲಿ ಅವರು ಹೆತ್ತವರಿಗೂ, ಊರಿಗೂ, ನಮ್ಮ ಸಮಾಜಕ್ಕೂ ಒಳ್ಳೆಯ ಹೆಸರನ್ನು ತರುವಲ್ಲಿಯೂ, ಅದೇ ರೀತಿಯಲ್ಲಿ ದೇಶದಲ್ಲಿ ಸತ್ಪ್ರಜೆಯಾಗಿ ಬಾಳುವಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಕೃಪಾಶೀರ್ವಾದ ಸದಾ ಅವರ ಮೇಲಿರಲಿ ಎಂದು ಶುಭಾರೈಸಿದರು.





























 
 

ಈ ಸಂದರ್ಭದಲ್ಲಿ ಯುವವಾಹಿನಿ ಪುತ್ತೂರು ಘಟಕದ ಉಪಾಧ್ಯಕ್ಷ ಅಣ್ಣಿ ಪೂಜಾರಿ ಚಿಕ್ಕಮುಡ್ನೂರು, ನಿಕಟಪೂರ್ವ ಅಧ್ಯಕ್ಷ ಉಮೇಶ್ ಬಾಯಾರ್, ಕಾರ್ಯದರ್ಶಿ ಶಮಿತ್ ಪರ್ಪುಂಜ, ಕೋಶಾಧಿಕಾರಿ ಶರತ್ ಕೈಪಂಗಳ ದೋಳ, ಘಟಕದ ಮಾಜಿ ಅಧ್ಯಕ್ಷ ಉದಯ ಪೂಜಾರಿ ಕೋಲಾಡಿ, ನಿರ್ದೇಶಕರಾದ ದಾಮೋದರ ಸುವರ್ಣ ಶಾಂತಿಗೋಡು, ಶಿವಪ್ರಸಾದ್ ಕುಂಬ್ರ, ಹರೀಶ್ ಎಂ. ಕೆ, ಮೋಹನ್ ಶಿಬರ, ನವ್ಯ ದಾಮೋದರ್ ಶಾಂತಿಗೋಡು, ಕೋಚಣ್ಣ ಪೂಜಾರಿ ಎಂಡೆಸಾಗು, ಬಾಳಪ್ಪ ಸುವರ್ಣ ಬಾಲಯ, ವಸಂತ ಪೂಜಾರಿ ಕಲ್ಲರ್ಪೆ, ವೈಷ್ಣವಿ ಶಾಂತಿಗೋಡು ಹಾಗೂ ಎಲ್ಲಾ ವಿದ್ಯಾರ್ಥಿಗಳ ಹೆತ್ತವರು ಹಾಗೂ ಬಂಧುಗಳು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top