ಮುಂಡತ್ತಡ್ಕ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯಿಂದ 50 ಸಾವಿರ ದೇಣಿಗೆ ಹಸ್ತಾಂತರ

ಸವಣೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್ ಇದರ ವತಿಯಿಂದ ಕಡಬ ತಾಲೂಕು ಸವಣೂರು ಗ್ರಾಮದ ಮುಂಡತ್ತಡ್ಕ ಶ್ರೀ ಮಾರಿಯಮ್ಮ ದೇವಸ್ಥಾನ ಜೀರ್ಣೋದ್ಧಾರ ಅಂಗವಾಗಿ ಕ್ಷೇತ್ರದ ವತಿಯಿಂದ ರೂ 50000 ಡಿ ಡಿಯನ್ನು ಹಸ್ತಾಂತರಿಸಲಾಯಿತು.

ಕಡಬ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಮಹೇಶ್‌ ಕೆ ಸವಣೂರು ರವರು ಶ್ರೀ ಮಾರಿಯಮ್ಮ ದೇವಸ್ಥಾನ ದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಿನೇಶ್ ಮೆದು,ಕಾರ್ಯದರ್ಶಿ ತಾರಾನಾಥ ಕಾಯರ್ಗರವರಿಗೆ ಹಸ್ತಾಂತರ ಮಾಡಲಾಯಿತು.

ತಾಲೂಕು ಕೃಷಿ ಅಧಿಕಾರಿ ಸೋಮೇಶ್, ಸವಣೂರು ಸೇವಾ ಪ್ರತಿನಿಧಿ ಪ್ರೇಮ ಆರೆಲ್ತಡಿ, ಟ್ರಸ್ಟ್ ನ ಅಧ್ಯಕ್ಷ ಬಾಬು, ಗೌರವ ಸಲಹೆಗಾರರಾದ ಕಿನ್ನಿಗ ಆರ್, ಕಾರ್ಯದರ್ಶಿ ಕಿರಣ್ ಕುಮಾರ್ ಜಿ, ಮೊದಲಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top