ಉತ್ತಮ ಕ್ರಿಕೇಟ್ ಆಟಗಾರ ಮಂಜು ನೇಣು ಬಿಗಿದು ಆತ್ಮಹತ್ಯೆ

ಕಾಸರಗೋಡು: ಉತ್ತಮ ಕ್ರಿಕೆಟ್ ಆಟಗಾರ ಎಂದೇ ಗುರುತಿಸಿಕೊಂಡಿದ್ದ, ಕುಂಬ್ಳೆಯ ನಾಯ್ಕಾಪು ನಿವಾಸಿ ಮಂಜು (24 ವ.) ಶನಿವಾರ ಬೆಳಿಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮನೆ ಸಮೀಪದ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶನಿವಾರ ಬೆಳಿಗ್ಗೆ ಕಂಡುಬಂದಿದ್ದಾರೆ.

ಶುಕ್ರವಾರ ರಾತ್ರಿ 11.30ರ ಸುಮಾರಿಗೆ ಕರೆಯೊಂದು ಬಂದಿದ್ದು, ಮಾತನಾಡುತ್ತಾ ಹೊರ ಹೋಗಿದ್ದಾರೆ. ಎಷ್ಟು ಹೊತ್ತಾದರೂ ವಾಪಾಸು ಬಂದಿಲ್ಲ. ಮನೆಯವರು ಕರೆ ಮಾಡಿದರೂ ಸ್ವೀಕರಿಸಿಲ್ಲ. ಶನಿವಾರ ಬೆಳಿಗ್ಗೆ ಮನೆ ಸಮೀಪದ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.







https://screenapp.io/app/#/shared/8P4BcrrHNx























 
 

ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ನಡೆಯುತ್ತಿದ್ದ ಕ್ರಿಕೆಟ್ ಪಂದ್ಯಗಳಲ್ಲಿ ಮಂಜು ಪಾಲ್ಗೊಳ್ಳುತ್ತಿದ್ದು, ಉತ್ತಮ ಆಟಗಾರನಾಗಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದರು. ಅಂಡರ್ ಆರ್ಮ್ ಕ್ರಿಕೆಟ್ ನಲ್ಲಿ ಉತ್ತಮ ಹೆಸರು ಗಳಿಸಿದ್ದರು. ಮೃತರು ತಂದೆ, ತಾಯಿ, ತಮ್ಮನನ್ನು ಅಗಲಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top