ನಟ ದರ್ಶನ್‍ ಗೆ ಜೀವಾವಧಿ-ಮರಣ ದಂಡನೆ ಶಿಕ್ಷೆಯಾಗಲಿ | ಪೋಸ್ಟ್ ಒಂದನ್ನು ಎಕ್ಸ್ ನಲ್ಲಿ ರೀಟ್ವಿಟ್ ಮಾಡಿದ ನಟಿ ರಮ್ಯಾ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇ ಬೇಕು ಎಂದು ನಟಿ ರಮ್ಯಾ ಪೋಸ್ಟ್ ಮೂಲಕ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸೆಕ್ಷನ್ 302 ರ ಅಡಿಯಲ್ಲಿ ಶಿಕ್ಷೆ ಸಾಬೀತಾದರೆ ದರ್ಶನ್ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ ಪಡೆಯುವ ಸಾಧ್ಯತೆಯಿದೆ. ಈ ಪ್ರಕರಣದಲ್ಲಿ ಹಣ ಅಥವಾ ಇತರೆ ಅಂಶ ಪರಿಣಾಮ ಬೀರಬಾರದು. ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಹೇಳಿರುವ ಪೋಸ್ಟ್ ಒಂದನ್ನು ಎಕ್ಸ್’ ನಲ್ಲಿ ರಮ್ಯಾ ರೀಟ್ವಿಟ್ ಮಾಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಒಟ್ಟು 13 ಮಂದಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಸದ್ಯ ಈ ಬಗ್ಗೆ ತನಿಖೆ ನಡೆಯುತ್ತಿರುವಾಗಲೇ ಇತ್ತ ದರ್ಶನ್ ಪರ ಹಾಗೂ ವಿರೋಧದ ಬಗ್ಗೆ ಚರ್ಚೆ ನಡೆಯುತ್ತಿದೆ.





























 
 

ಪವಿತ್ರಾ ಗೌಡ ಅವರಿಗೆ ಆಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕಾಗಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನನ್ನು ಬೆಂಗಳೂರಿಗೆ ಕರೆತಂದು ಅಲ್ಲಿ ಶೆಡ್ ವೊಂದರಲ್ಲಿ ಹಲ್ಲೆ ಮಾಡಿ, ಕೊಲೆಗೈದು ಮೃತದೇಹವನ್ನು ಮೋರಿಗೆ ಎಸೆಯಲಾಗಿದೆ. ಈ ಪ್ರಕರಣದಲ್ಲಿ ದರ್ಶನ್ ಸಹಿತ 13 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಇತ್ತ ಚಿತ್ರರಂಗ ಈ ಘಟನೆ ಬಗ್ಗೆ ಕೇಳಿ ಶಾಕ್ ಆಗಿದೆ. ಕೆಲ ಕಲಾವಿದರು ವಿಚಾರಣೆ ಪೂರ್ತಿ ಆಗಿ ದರ್ಶನ್ ಆದಷ್ಟು ಬೇಗ ಸಂಕಷ್ಟದಿಂದ ಪಾರಾಗಲಿ ಎಂದು ಟ್ವಿಟ್ ಮಾಡಿದ್ದಾರೆ.

ಸದ್ಯ ರಮ್ಯಾ ಅವರ ಈ ಟ್ವಿಟ್ ಗಮನ ಸೆಳೆದಿದ್ದು ಕೆಲವರು ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top