ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತ ನಿಧನ

ಬೆಳ್ತಂಗಡಿ: ವೇಣೂರು ಕರಿಮಣೇಲು ಗುತ್ತು ನಿವಾಸಿ, ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತ (71) ಹೃದಯಾಘಾತದಿಂದ ಜೂ.12 ರಂದು ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.

ಅವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿ, ಉದಯವಾಣಿ, ವಿಜಯ ಕರ್ನಾಟಕ, ಕನ್ನಡಪ್ರಭ ಪತ್ರಿಕೆಯ ವೇಣೂರು ಭಾಗದ ವರದಿಗಾರರಾಗಿ ಅನೇಕ ವರ್ಷ ಸೇವೆ ಸಲ್ಲಿಸಿದ್ದರು. ಜತೆಗೆ ವೇಣೂರು ಗ್ರಾ.ಪಂ. ಮಾಜಿ ಸದಸ್ಯರಾಗಿ, ಧಾರ್ಮಿಕ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡಿದ್ದರು.

ಈ ಬಾರಿ 2024 ವೇಣೂರು ಬಾಹುಬಲಿ ಮಹಾಮಸ್ತಕಾಭೀಷಕದ ಮಾಧ್ಯಮ ಸಮಿತಿ ಸಂಚಾಲಕರಾಗಿ, 2012 ರಲ್ಲೂ ಮಹಾಮಸ್ತಕಾಭೀಷಕ ಮಾಧ್ಯಮ ಸಮಿತಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.





























 
 

ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top