ಸರ್ಕಾರಿ ಬಸ್ ಅವ್ಯವಸ್ಥೆ | ವಿದ್ಯಾರ್ಥಿಗಳ ಸಮಸ್ಯೆ  ಆಲಿಸಿದ ಶಾಸಕ ಅಶೋಕ್ ರೈ | ಸಮಸ್ಯೆ  ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ

ಪುತ್ತೂರು : ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಶಾಸಕ ಅಶೋಕ್ ಕುಮಾರ್ ರೈಯವರು ಜೂ.24 ರಂದು ಭೇಟಿ ನೀಡಿದರು.

ಬಸ್ ಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳ ಜೊತೆ ರೂಟ್ ಬಸ್ ಸಂಚಾರದ ವ್ಯವಸ್ಥೆ ಮತ್ತು ಅವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ಸರಕಾರಿ ಬಸ್ ಸರಿಯಾದ ಸಮಯಕ್ಕೆ ಬರುತ್ತಿಲ್ಲ, ಕೆಲವೊಂದು ಬಾರಿ ಬಸ್ ಇರುವುದಿಲ್ಲ, ಬಸ್ ಖಾಲಿ ಇದ್ದರೂ ನಿಲ್ಲಿಸುವುದಿಲ್ಲ, ಬಸ್ ಸಮಯ ಪಾಲನೆಯಿಲ್ಲ, ನಾವು ಬಸ್ ನಿಲ್ದಾಣದಲ್ಲೇ ಬಸ್ ಗಾಗಿ ಕಾಯುತ್ತಿದ್ದರೂ ಬಸ್ ಇಲ್ಲ ಎಂಬ ಬಗ್ಗೆ ಸಂಬಂಧಿಸಿದವರು ಯಾವುದೇ ಮಾಹಿತಿ ನೀಡುವುದಿಲ್ಲ, ಬೆಳಿಗ್ಗೆ ತಡವಾಗಿ ಬಸ್ ಬರುತ್ತದೆ. ಸಂಜೆ ಮನೆಗೆ ಹೋಗುವ ವೇಳೆ ಬಸ್ ಇರುವುದಿಲ್ಲ, ಇದ್ದರೂ ರಶ್ ಇರುತ್ತದೆ ಎಂಬ ದೂರುಗಳನ್ನು ಶಾಸಕರ ಬಳಿ ವಿದ್ಯಾರ್ಥಿಗಳು ಹೇಳಿದರು.





























 
 

ವಿದ್ಯಾರ್ಥಿಗಳು ಈ ಆರೋಪ ಮಾಡುವ ವೇಳೆ ಸ್ಥಳೀಯ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳೂ ಶಾಸಕರ ಜೊತೆಗಿದ್ದರು. ವಿದ್ಯಾರ್ಥಿಗಳು ಬಸ್ ಸಮಸ್ಯೆ ಬಗ್ಗೆ ಶಾಸಕರಲ್ಲಿ ಹೇಳುತ್ತಿರುವಾಗಲೇ ಅಧಿಕಾರಿಗಳು ಆ ಬಗ್ಗೆ ಮಾಹಿತಿ ನೀಡುತ್ತಿದ್ದರು.

 ಬಸ್ ಕೊರತೆಯನ್ನು  ಮುಂದಿನ 15 ದಿನದೊಳಗೆ ಸರಿಪಡಿಸುವುದಾಗಿ ಶಾಸಕರು ಭರವಸೆ ನೀಡಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top