ಉಳ್ಳಾಲ: ಭಾರೀ ಮಳೆಗೆ ಬೆಳ್ಳಂಬೆಳಗ್ಗೆ ಮನೆಯ ಹಿಂಬದಿಯ ಕಂಪೌಂಡ್ ಕುಸಿದುಬಿದ್ದು ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಮೃತಪಟ್ಟ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಮದನಿ ನಗರ ಎಂಬಲ್ಲಿ ಬುಧವಾರ ನಡೆದಿದೆ.
ಮನೆಯೊಳಗೆ ವಾಸ್ತವ್ಯವಿದ್ದ ಯಾಸಿರ್ (45), ಅವರ ಪತ್ನಿ ಮರಿಯಮ್ಮ (40), ಮಕ್ಕಳಾದ ರಿಯಾನ ಮತ್ತು ರಿಫಾನ ಮೃತಪಟ್ಟವರು.
ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದು, ರಕ್ಷಣ ಕಾರ್ಯಾಚರಣೆ ನಡೆಸಲಾಗಿದೆ. ಮೂವರ ಶವಗಳನ್ನು ಹೊರ ತೆಗೆಯಲಾಗಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅವಘಡ ಸಂಭವಿಸಿದೆ. ಅಬೂಬಕ್ಕರ್ ಎಂಬವರಿಗೆ ಸಂಬಂಧಿಸಿದ ಕಂಪೌಂಡ್ ಕುಸಿದು ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಸ್ಥಳೀಯರು ಮೂವರ ಮೃತದೇಹಗಳನ್ನು ಹೊರತೆಗೆದಿದ್ದು ಬಾಲಕಿ ಮೃತದೇಹಕ್ಕಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ.
























