ಕಾಂಗ್ರೆಸ್‍ ನಿಂದ ವಾಲ್ಮೀಕಿ ನಿಗಮದ ಕೋಟಿಗಟ್ಟಲೆ ಹಣ ಗೋಲ್ ಮಾಲ್ | ಬಿಜೆಪಿ ವತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ

ಮಂಗಳೂರು: ವಾಲ್ಮೀಕಿ ನಿಗಮದಲ್ಲಿ ಸರಕಾರಿ ಹಣದ ಗೋಲ್ ಮಾಲ್ ಮತ್ತು ಪರಿಶಿಷ್ಟ ಪಂಗಡದ ಅನುದಾನದ 187 ಕೋಟಿ ರೂಗಳನ್ನು ತೆಲಂಗಾಣದ ಚುನಾವಣೆ ಖರ್ಚಿಗೆ ವರ್ಗಾಯಿಸಿದ ಶಂಕೆ ಹಾಗೂ ಎಸ್.ಸಿ ಎಸ್.ಟಿ ಸಮಾಜಕ್ಕೆ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೇಸ್ ಸರಕಾರ ಮಾಡಿದ ದ್ರೋಹ ಖಂಡಿಸಿ ಮಂಗಳೂರಿನಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.

ಪ್ರತಿಭಟನಾಕಾರರು ಈ ಸಂದರ್ಭ ಡಿ.ಸಿ ಕಛೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಈ ಸಂದರ್ಭದಲ್ಲಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವಾ, ಎಸ್.ಟಿ ಮೋರ್ಚ ಅಧ್ಯಕ್ಷ ಹರೀಶ್ ಬಿಜತ್ರೆ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ನಿತೀಶ್ ಕುಮಾರ್, ಯುವರಾಜ್ , ಮಂಡಲ ಉಪಾಧ್ಯಕ್ಷರಾದ ಹರಿಪ್ರಸಾದ್ ಯಾದವ್, ಮುಕುಂದ ಬಜತ್ತೂರು, ಸುರೇಶ್ ಅತ್ರಮಜಲು, ದಯಾನಂದ ಶೆಟ್ಟಿ, ಪುನೀತ್ ಮಾಡತ್ತಾರು, ವಿರೂಪಾಕ್ಷ ಭಟ್, ಅರುಣ್ ವಿಟ್ಲ, ಕರುಣಾಕರ ನಾಯಿತೋಟು, ಹರೀಶ್ ವಿಟ್ಲ ಸಹಿತ ಹಲವಾರು ಪಕ್ಷಧ ಪ್ರಮುಖರನ್ನು ಬಂಧಿಸಲಾಯಿತು.





























 
 

ಮಂಗಳೂರಿನ ಕ್ಲಾಕ್ ಟವರಿನಿಂದ ಆರಂಭವಾದ ಪ್ರತಿಭಟನೆಯಲ್ಲಿ ಪುತ್ತೂರು ಎಸ್ .ಟಿ ಮೋರ್ಚ ಅಧ್ಯಕ್ಷರಾದ ಶಿವಪ್ಪ ನಾಯ್ಕ,ನಾರಾಯಣ ಚಾಕೊಟೆ, ಹರೀಶ್ ನಾಯ್ಕ್, ಪಕ್ಷದ ಪ್ರಮುಖ ಯತೀಂದ್ರ ಕೊಚ್ಚಿ,, ನಗರ ಮಹಿಳಾ ಮೋರ್ಚ ಅಧ್ಯಕ್ಷರಾದ ಜಯಶ್ರೀ ನಾಯಕ್, ಸ್ವರ್ಣಲತಾ ಹೆಗ್ಡೆ, ಸುಮತಿ, ಆಶಾ ಭಗವಾನ್, ಸರೋಜಿನಿ, ನಳಿನಾಕ್ಷೀ, ಸುನೀತಾ ಮೊದಲಾದವರು ಭಾಗವಹಿಸಿದ್ದರು

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top