ಬಿಎಮ್ಎಸ್ ಅಖಿಲ ಭಾರತೀಯ ಅಧ್ಯಕ್ಷ ಹಿರಣ್ಮಯಿ ಪಾಂಡ್ಯ ಪುತ್ತೂರಿಗೆ ಭೇಟಿ

ಪುತ್ತೂರು: ಭಾರತೀಯ ಮಜ್ದೂರ್ ಸಂಘದ ಅಖಿಲ ಭಾರತೀಯ ಅಧ್ಯಕ್ಷರಾದ ಹಿರಣ್ಮಯಿ ಪಾಂಡ್ಯ ಅವರು ದಕ್ಷಿಣ ಕನ್ನಡ ಜಿಲ್ಲಾ ಬಿಎಮ್ಎಸ್ ಕಚೇರಿಗೆ ಭೇಟಿ ನೀಡಿದರು. ಸಂಘದ ಸದಸ್ಯರನ್ನು ಉದ್ದೇಶಿಸಿ ಮಾರ್ಗದರ್ಶನವನ್ನು ಮಾಡಿದರು.

ಈ ಸಂದರ್ಭದಲ್ಲಿ ಹೆಚ್ ಎಲ್ ವಿಶ್ವನಾಥ್ ಅವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಬಿಎಮ್ಎಸ್ ನ ಅಧ್ಯಕ್ಷರಾದ ವಕೀಲರಾದ ಅನಿಲ್ ಕುಮಾರ್ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಕಾಸರಗೋಡು ಜಿಲ್ಲಾ ಬಿಎಮ್ಎಸ್ ನ ಅಧ್ಯಕ್ಷರಾದ ಉಪೇಂದ್ರ ಅವರು ಉಪಸ್ಥಿತರಿದ್ದರು.

ಜಿಲ್ ಬಿ ಎಂ ಎಸ್ ನ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಗೋಪಾಲಕೃಷ್ಣ ಅವರು ಸ್ವಾಗತಿಸಿ ಜಿಲ್ಲಾ ಉಪಾಧ್ಯಕ್ಷರಾದ ರೋಹಿತಾಶ್ವ ಅವರು ವಂದಿಸಿದರು.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top