ಪಾರಿವಾಳ ರಕ್ಷಣೆಗೆ ಹೋದ ಬಾಲಕ ವಿದ್ಯುತ್ ತಂತಿ ತಗುಲಿ ಮೃತ್ಯು

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆ ಮೊಳಕಾಲ್ಕೂರು ತಾಲೂಕಿನ ಹನುಮಾಪುರ ಗ್ರಾಮದಲ್ಲಿ ವಿದ್ಯುತ್‌ ಕಂಬಕ್ಕೆ ಸಿಲುಕಿದ್ದ ಪಾರಿವಾಳವನ್ನು ರಕ್ಷಿಸಲು ಕಂಬ ಏರಿದ್ದ ಬಾಲಕನಿಗೆ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತಪಟ್ಟ ಬಾಲಕ ರಾಮಚಂದ್ರ (12) ಎಂದು ಗುರುತಿಸಲಾಗಿದೆ.

ಈತ ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಗ್ರಾಮದ ವಿದ್ಯುತ್‌ ಕಂಬದಲ್ಲಿನ ತಂತಿಗೆ ಪಾರಿವಾಳವೊಂದು ಸಿಲುಕಿ ಜೀವನ್ಮರಣ ಮಧ್ಯೆ ಹೋರಾಡುತ್ತಿರುವುದನ್ನು ಗಮನಿಸಿದ ಈತ ಪಾರಿವಾಳವನ್ನು ರಕ್ಷಿಸಲೆಂದು ವಿದ್ಯುತ್ ಕಂಬ ಏರಿದ್ದ. ಈ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

































 
 

ವಿದ್ಯುತ್‌ ಶಾಕ್‌ನಿಂದಾಗಿ ಬಾಲಕನ ಶವ ವಿದ್ಯುತ್‌ ಕಂಬದಲ್ಲಿನ ತಂತಿಗೆ ಸಿಲುಕಿ ನೇತಾಡುತ್ತಿದ್ದು, ಮಾನವೀಯತೆಯಿಂದ ಪಾರಿವಾಳದ ಜೀವ ಉಳಿಸಲು ಮುಂದಾಗಿದ್ದ ಬಾಲಕ ತನ್ನ ಜೀವವನ್ನೇ ಬಲಿ ನೀಡಿದ್ದಾನೆ. ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಘಟನಾ ಸ್ಥಳಕ್ಕೆ ರಾಂಪುರ ಪಿಎಎಸ್‌ಐ ಮಹೇಶ್ ಹೊಸಪೇಟೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top