ಕಾಠ್ಮಂಡು ವಿಮಾನ ಪಥನ | 19 ಮಂದಿ ಮೃತ್ಯು

ಕಾಠ್ಮಂಡು : ಕಾಶ್ಮೀಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಶೌರ್ಯ ಏರ್ ಲೈನ್ಸ್ ನ ವಿಮಾನ ಪತನಗೊಂಡಿದ್ದು, ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 19 ಮಂದಿಯೂ ಸಜೀವವಾಗಿ ದಹನವಾಗಿರುವ ಘಟನೆ ಬುಧವಾರ (ಜು.24) ನಡೆದಿದೆ.

ಕಾಂಡುವಿನ ಪೋಗ್ರಾದಿಂದ ವಿಮಾನ ಟೇಕ್ ಆಫ್ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ವಿಮಾನದಲ್ಲಿ ಕೇವಲ ಏರ್ ಲೈನ್ಸ್ ನ ಟೆಕ್ನಿಕಲ್ ಸಿಬ್ಬಂದಿಗಳು ಮಾತ್ರ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ವಿಮಾನದಲ್ಲಿ ಬೇರೆ ಯಾವ ಪ್ರಯಾಣಿಕರು ಇಲ್ಲ ಎಂಬುದಾಗಿ ವರದಿ ವಿವರಿಸಿದ್ದು, ಸಾವು-ನೋವಿನ ಬಗ್ಗೆ ಇನ್ನಷ್ಟೇ ಸ್ಪಷ್ಟ ಮಾಹಿತಿ ತಿಳಿದು ಬರಬೇಕಾಗಿದೆ ಎಂದು TIAನ ಮಾಹಿತಿ ಅಧಿಕಾರಿ ಜ್ಞಾನೇಂದ್ರ ಭುಲ್ ತಿಳಿಸಿದ್ದಾರೆ.

































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top