ಕಡಬ ಒಕ್ಕಲಿಗ ಗೌಡ ಸೇವಾ ಸಂಘದಿಂದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ | ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಸಮುದಾಯ ಭವನ ಹಾಗೂ ಸಂಘದ ಕಾರ್ಯಚಟುವಟಿಕೆಗಳ ಕುರಿತು ಚರ್ಚೆ

ಕಡಬ: ಕಡಬ ಒಕ್ಕಲಿಗ ಗೌಡ ಸಮುದಾಯ ಭವನದ ಕುರಿತು ಚರ್ಚಿಸಲು ಸಂಘದ ನಿಯೋಗ ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಇಂದು ಭೇಟಿ ಮಾಡಲಾಯಿತು.

ಮಾತೃ ಸಮಿತಿಯ ಅಧ್ಯಕ್ಷ ಸುರೇಶ್ ಗೌಡ ಬೈಲು ಅವರ ನೇತೃತ್ವದಲ್ಲಿ ತೆರಳಿದ ನಿಯೋಗ ಕರ್ನಾಟಕ ಘನ‌ ಸರಕಾರದ ಉಪ ಮುಖ್ಯಮಂತ್ರಿಗಳಾದ ಸನ್ಮಾನ್ಯ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಹತ್ವಾಕಾಂಕ್ಷಿ ಯೋಜನೆಯಾದ ನೂತನ ಸಮುದಾಯ ಭವನದ ನಿರ್ಮಾಣ ಕಾಮಾಗಾರಿ ಹಾಗೂ ನಮ್ಮ ಸಂಘದಿಂದ ನಡೆಯುತ್ತಿರು‌ವ ಕಾರ್ಯ ಚಟುವಟಿಕೆಗಳ ಬಗ್ಗೆ ವಿವರಣೆ ನೀಡಲಾಯಿತು.

ಈ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಅವರು ಆರ್ಥಿಕ‌ ಸಹಕಾರದ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದರು.

































 
 

ನಿಯೋಗದಲ್ಲಿ ಸಂಘದ ಪ್ರಮುಖರಾದ ಕಿರಣ್ ಬುಡ್ಲೆಗುತ್ತು, ರಂಜಿತ್ ಪದಕಂಡ, ಹರಿಶ್ ಉಬರಡ್ಕ, ಶಿವರಾಮ ಏನೆಕಲ್, ಗೋಪಾಲ ಎಣ್ಣೆಮಜಲು, ಭರತ್ ಮುಂಡೋಡಿ,  ಹಾಗೂ ಸುಧೀರ್ ಶೆಟ್ಟಿ, ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top