ಬೈಕ್‍ ಗೆ ಬೊಲೆರೋ ಡಿಕ್ಕಿ | ಪುತ್ರಿ ಮೃತ್ಯು, ತಂದೆಗೆ ಗಂಭೀರ ಗಾಯ

ಬೆಳ್ತಂಗಡಿ : ಬೈಕ್‍ ಗೆ ಬೊಲೆರೊ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ತಂದೆಯ ಜೊತೆ ಹೋಗುತ್ತಿದ್ದ ಮಗಳು ಮೃತಪಟ್ಟು, ತಂದೆ ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ಮುಂಡಾಜೆಯಲ್ಲಿ ನಡೆದಿದೆ.

ಮಂಡಾಜೆ ಕಲ್ಮಂಜ ಕುಡೆಂಚಿ ಗುರುಪ್ರಸಾದ್ ಗೋಖಲೆ ಎಂಬವರ ಪುತ್ರಿ  ಅನರ್ಥ್ಯ (9) ಮೃತಪಟ್ಟ ಬಾಲಕಿ.

ಮಂಡಾಜೆ ಕಲ್ಮಂಜ ಕುಡೆಂಚಿ ಗುರುಪ್ರಸಾದ್ ಗೋಖಲೆ ಹಾಗೂ ಅವರ ಮಗಳು ಅನರ್ಥ್ಯ ಉಜಿರೆಯಿಂದ ಬೈಕ್‌ನಲ್ಲಿ ಮನೆಗೆ ಹೊರಟಿದ್ದರು. ಈ ವೇಳೆ ಬೊಲೆರೊ ಹಿಂದಿನಿಂದ ಡಿಕ್ಕಿ ಹೊಡೆದು ಬಳಿಕ ವಾಹನವನ್ನು ನಿಲ್ಲಿಸದೆ ಪರಾರಿಯಾಗಿತ್ತು. ಗಾಯಗೊಂಡಿದ್ದ ತಂದೆ-ಮಗಳನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಅನರ್ಥ್ಯ ಮೃಪಟ್ಟಿರುವುದಾಗಿ ತಿಳಿದುಬಂದಿದೆ. ಅನರ್ಘ ಉಜಿರೆ ಎಸ್‌ಡಿಎಂ ಶಾಲೆಯ 4 ನೇ ತರಗತಿ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ.







https://screenapp.io/app/#/shared/8P4BcrrHNx























 
 

ಅಪಘಾತವಾದ ಬಳಿಕ ತಪ್ಪಿಸಿಕೊಂಡಿದ್ದ ಬೊಲೆರೊ ವಾಹನವನ್ನು ಸಾರ್ವಜನಿಕರ ಸಹಕಾರದಿಂದ ಪತ್ತೆ ಹಚ್ಚಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top