ಪುತ್ತೂರು ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನಿಂದ ಗೌಡರ ಆಟಿ ಗೌಜಿ | ನಿವೃತ್ತ ಗೌಡ ಸರಕಾರಿ ನೌಕರರಿಗೆ ಗೌರವಾರ್ಪಣೆ, ಎಸ್‍ ಎಸ್‍ ಎಲ್‍ ಸಿ, ಪಿಯುಸಿಯಲ್ಲಿ ಶೇ.90 ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ, ಆಟೋಟ ಸ್ಪರ್ಧೆ

ಹಿರೇಬಂಡಾಡಿ: ಪುತ್ತೂರು ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ ಪ್ರಾಯೋಜಕತ್ವದಲ್ಲಿ ಹಿರೇಬಂಡಾಡಿ ಒಕ್ಕಲಿಗ ಗೌಡ ಸೇವಾ ಸಮಿತಿ, ಹಿರೇಬಂಡಾಡಿ ಒಕ್ಕಲಿಗ ಮಹಿಳಾ ಘಟಕ, ಹಿರೇಬಂಡಾಡಿ ಒಕ್ಕಲಿಗ ಯುವ ಘಟಕ, ಹಿರೇಬಂಡಾಡಿ ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ ಸಂಘಗಳ ಒಕ್ಕೂಟಗಳ ಸಹಯೋಗದಲ್ಲಿ ಗೌಡರ ಆಟಿ ಗೌಜಿ ಕಾರ್ಯಕ್ರಮ ಇಂದು ಹಿರೇಬಂಡಾಡಿ ಮುರದಮೇಲು ಶಿವನಗರ ಶ್ರೀ ಮಂಜುಶ್ರೀ ಭಜನಾ ಮಂದಿರದಲ್ಲಿ ನಡೆಯಿತು.

ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಮುಖ್ಯ ಅಥಿಯಾಗಿ ಪಾಲ್ಗೊಂಡು ಶುಭ ಹಾರೈಸಿದರು. ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಪುತ್ತೂರು ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಅಧ್ಯಕ್ಷ ಡಿ.ವಿ.ಮನೋಹರ ಪಾಲ್ಗೊಂಡಿದ್ದರು.

ವೇದಿಕೆಯಲ್ಲಿ ಉಪ್ಪಿನಂಗಡಿ ಒಕ್ಕಲಿಗ ಸ್ವಸಹಾಯ ಟ್ರಸ್ಟ್ ವಲಯಾಧ್ಯಕ್ಷ ಗಂಗಯ್ಯ ಗೌಡ ಕನ್ನಡಾರು, ಹಿರೇಬಂಡಾಡಿ ಗ್ರಾಮ ಸಮಿತಿ ಗೌರವಾಧ್ಯಕ್ಷ ಉಮೇಶ್‍ ಬಂಡಾಡಿ, ಅಧ್ಯಕ್ಷ ಸುಧಾಕರ್ ಕಜೆ, ಹಿರೇಬಂಡಾಡಿ ಒಕ್ಕಲಿಗ ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ವಿನೋದ್, ಹಿರೇಬಂಡಾಡಿ ಯುವ ಘಟಕದ ಅಧ್ಯಕ್ಷ ಗುರುರಾಜ್‍ ಹೊಸಮನೆ, ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯ ಹೆನ್ನಾಳ ಉಪಸ್ಥಿತರಿದ್ದರು.





































 
 

ಕಾರ್ಯಕ್ರಮದಲ್ಲಿ ನಿವೃತ್ತರಾದ ಗೌಡ ಸರಕಾರಿ ನೌಕರರಿಗೆ ಗೌರವಾರ್ಪಣೆ, ಎಸ್‍ ಎಸ್‍ ಎಲ್‍ ಸಿ, ಪಿಯುಸಿಯಲ್ಲಿ ಶೇ.90 ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ನಡೆಯಿತು.

ಆಟೋಟ ಸ್ಪರ್ಧೆಗಳ ಅಂಗವಾಗಿ ಅಂಗನವಾಡಿ ಮಕ್ಕಳಿಗೆ ಕಪ್ಪೆ ಜಿಗಿತ, ಕಾಳು ಹೆಕ್ಕುವುದು, 1 ರಿಂದ 5ನೇ ತರಗತಿ ಮಕ್ಕಳಿಗೆ ಬಾಲ್‍ ಪಾಸ್, ಲಕ್ಕೀಗೇಮ್, 6 ರಿಂದ 10 ನೇ ತರಗತಿ ಮಕ್ಕಳಿಗೆ ಲಕ್ಕಿಗೇಮ್, ಸಂಗೀತ ಕುರ್ಚಿ, ಹಗ್ಗಜಗ್ಗಾಟ, ಉಪ್ಪುಮೂಟೆ, 60 ವರ್ಷ ಮೇಲ್ಪಟ್ಟವರಿಗೆ ಲಿಂಬೆ ಚಮಚ ಓಟ, ವೇಗದ ನಡಿಗೆ ಸ್ಪರ್ಧೆ ನಡೆಯಿತು. ವಿಜೇತರಾದವರಿಗೆ ಬಹುಮಾನ ನೀಡಲಾಯಿತು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top