ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ದ.ಕ.ಜಿಲ್ಲಾ ಅಧ್ಯಕ್ಷರಾಗಿ ಭರತ್ ಮುಂಡೋಡಿ ನೇಮಕ | ನಾಳೆ (ಆ14) ಮಂಗಳೂರಿನಲ್ಲಿ ಪ್ರಾಧಿಕಾರದ ಕಚೇರಿ ಶುಭಾರಂಭ

ಪುತ್ತೂರು: ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ದ.ಕ.ಜಿಲ್ಲಾ ಅಧ್ಯಕ್ಷರಾಗಿ ಕೆಪಿಸಿಸಿ ಸಂಯೋಜಕ ಭರತ್ ಮುಂಡೋಡಿ ಅವರನ್ನು ನೇಮಕ ಮಾಡಲಾಗಿದೆ.

ಪ್ರಾಧಿಕಾರದಿಂದ ಪ್ರತಿ ಜಿಲ್ಲಾ ಅಧ್ಯಕ್ಷರಿಗೆ ಕಚೇರಿ ನೀಡಲಾಗುತ್ತಿದ್ದು, ಮಂಗಳೂರಿನಲ್ಲಿ ಆ.14 ಬುಧವಾರ ಬೆಳಿಗ್ಗೆ 10.30 ಕ್ಕೆ ಕಚೇರಿ ಉದ್ಘಾಟನೆಗೊಳ್ಳಲಿದೆ.

ಮಹಿಳೆಯರ ಸ್ವಾವಲಂಬನೆಗಾಗಿಯೇ  ಇರುವ ಗ್ಯಾರಂಟಿ ಯೋಜನೆ ಇರುವುದು. ಈ ನಿಟ್ಟಿನಲ್ಲಿ ಸಮಾಜದಲ್ಲಿ ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಂಡಿರುವ ಗುತ್ತಿಗಾರಿನ ಲೀಲಾವತಿ ಅಪ್ಪಣ್ಣ ಆಚಾರಿ ಅವರು ಕಚೇರಿಯನ್ನು ಉದ್ಘಾಟಿಸಲಿದ್ದಾರೆ. ಸಮಾರಂಭಕ್ಕೆ ಆಗಮಿಸುವಇತರ ಅತಿಥಿಗಳು ದೀಪ ಪ್ರಜ್ವಲನೆ ಮಾಡಲಿದ್ದಾರೆ.







https://screenapp.io/app/#/shared/8P4BcrrHNx























 
 

ಕಚೇರಿ ಉದ್ಘಾಟನೆ ಬಳಿಕ 11 ಗಂಟೆಗೆ ಪ್ರಾಧಿಕಾರದ ಸಭೆ ನಡೆಯಲಿದ್ದು, ಪ್ರಾಧಿಕಾರ ಕಮಿಟಿಯ ಕಾರ್ಯದರ್ಶಿಯಾಗಿರುವ ಜಿಲ್ಲಾ ಪಂಚಾಯತ್ ಸಿಇಒ ಆನಂದ್ ಪಾಲ್ಗೊಳ್ಳಲಿದ್ದಾರೆ ಎಂದು ಭರತ್ ಮುಂಡೋಡಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top