ಪದ್ಮನಾಭ ಕೋಟ್ಯಾನ್ ಮನೆ ದರೋಡೆ ಪ್ರಕರಣ | ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ದ.ಕ. ಜಿಲ್ಲಾ ಮೂರ್ತೆದಾರರ ಮಹಾಮಂಡಲದಿಂದ ಮನವಿ

ಬಂಟ್ವಾಳ: ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಉಳಾಯಿಬೆಟ್ಟುವಿನಲ್ಲಿ ಪದ್ಮನಾಭಕೋಟ್ಯಾನ್ ಅವರ ಮನೆಗೆ ಮುಸುಕುಧಾರಿಗಳು ನುಗ್ಗಿ ಮನೆಮಂದಿಗೆ ಹಲ್ಲೆ ನಡೆಸಿ ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿಗಳನ್ನು ಬಂಧಿಸಿ ದರೋಡೆ ಮಾಡಿದ ವಸ್ತುಗಳನ್ನು ವಶಪಡಿಸಿಕೊಳ್ಳುವಂತೆ ದ.ಕ. ಜಿಲ್ಲಾ ಮೂರ್ತೆದಾರರ ಮಹಾಮಂಡಲದ ಅಧ್ಯಕ್ಷ ಕೆ.ಸಂಜೀವ ಪೂಜಾರಿ ನೇತೃತ್ವದಲ್ಲಿ ಆಡಳಿತ ಮಂಡಳಿಯ ನಿಯೋಗ ಮಂಗಳೂರು ನಗರ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಕೆಲವು ಆರೋಪಿಗಳನ್ನು ಬಂಧಿಸಿದ್ದರೂ ಅವರು ದರೋಡೆ ಮಾಡಿದ ನಗದು ಹಾಗೂ ಚಿನ್ನಾಭರಣಗಳು ವಶಕ್ಕೆ ಪಡೆದುಕೊಂಡಿರುವುದಿಲ್ಲ. ಅಲ್ಲದೆ ಪ್ರಕರಣಕ್ಕೆ ಸಂಬಂಧಪಟ್ಟ ಮುಖ್ಯ ಆರೋಪಿಗಳು ಅಂದರೆ ದರೋಡೆಗೆ ಸಂಬಂಧಪಟ್ಟ ವಸ್ತುಗಳು ಇವರಲ್ಲಿವೆ ಎಂದು ಹೇಳಲಾದ ಆರೋಪಿಗಳು ಇನ್ನು ಪತ್ತೆಯಾಗಿರುವುದಿಲ್ಲ.

ಕಳೆದ ಜೂ. 21ರಂದು ಪ್ರಕರಣ ನಡೆದಿದ್ದು 12 ಮಂದಿ ಮುಸುಕುಧಾರಿಗಳು ಪದ್ಮನಾಭ ಕೋಟ್ಯಾನ್ ಅವರ ಮನೆಗೆ ಅಕ್ರಮ ಪ್ರವೇಶಗೈದು ಮನೆಮಂದಿಯನ್ನು ಕಟ್ಟಿ ಹಾಕಿ ಹಲ್ಲೆ ನಡೆಸಿ ನಗದು ಹಾಗೂ ಬೆಲೆಬಾಳುವ ವಸ್ತುಗಳನ್ನು ದರೋಡೆಗೈದಿದ್ದರು. ಅಲ್ಲದೆ ಬಲತ್ಕಾರವಾಗಿ ಕಾರಿನ ಕೀ ಪಡೆದು ಕಾರನ್ನು ಕೊಂಡು ಹೋಗಿ ಅರ್ಧದಲ್ಲಿ ಬಿಟ್ಟು ಹೋಗಿದ್ದಾರೆ. ಘಟನೆಯ ಬಳಿಕ ಪೊಲೀಸರು ಹಲವು ಆರೋಪಿಗಳನ್ನು ಬಂಧಿಸಿದ್ದರೂ ಕೂಡ ದರೋಡೆಯಾದ ವಸ್ತುಗಳ ವಶವಾಗಿರುವುದಿಲ್ಲ, ಪ್ರಮುಖ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಪದ್ಮನಾಭ ಕೋಟ್ಯಾನ್ ಅವರು ಮೂರ್ತೆದಾರರ ಮಹಾಮಂಡಲದ ನಿರ್ದೇಶಕರಾಗಿದ್ದು ಅವರ ಮನೆಯಿಂದ ದರೋಡೆಯಾಗಿರುವ ಸೊತ್ತುಗಳನ್ನು ವಶ ಪಡಿಸಿಕೊಂಡು ವಾರಸುದಾರರಿಗೆ ಒಪ್ಪಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.





























 
 

ಮನವಿ ನೀಡುವ ಸಂದರ್ಭ ಅಧ್ಯಕ್ಷ ಸಂಜೀವ ಪೂಜಾರಿ, ಉಪಾಧ್ಯಕ್ಷ ರಾಜೇಶ್ ಸುವರ್ಣ, ನಿರ್ದೆಶಕರಾದ ಆರ್. ಸಿ. ನಾರಾಯಣ್, ವಿಶ್ವನಾಥ ಬಿ. ವಿಜಯ್ ಕುಮಾರ್ ಸೊರಕೆ, ಗಣೇಶ್ ಮೂಡುಪೆರಾರ, ಶಿವಪ್ಪ ಸುವರ್ಣ, ಸಿಐಒ ಕಿಶೋರ್ ಕುಮಾರ್ ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top