ಇಂದು ಹೈಕಮಾಂಡ್‌ ಜೊತೆ ಸಿದ್ದರಾಮಯ್ಯ ನಿರ್ಣಾಯಕ ಸಭೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌ ಹೈಕಮಾಂಡ್‌ ಎದುರು ತನ್ನನ್ನು ಸಮರ್ಥನೆ ಮಾಡಿಕೊಳ್ಳಲು ಹೋಗುತ್ತಿದ್ದಾರೆ. ಜೊತೆಗೆ ಯಾವ ಕಾರಣಕ್ಕೂ ಸಿದ್ದರಾಮಯ್ಯ ರಾಜೀನಾಮೆ ನೀಡಲು ಸೂಚಿಸಬಾರದು ಎಂದು ಹೈಕಮಾಂಡ್‌ ಮೇಲೆ ಒತ್ತಡ ಹೇರಲು ಅವರ ಒಂದಷ್ಟು ಅತ್ಯಾಪ್ತ ಸಚಿವರೂ ಹೋಗುತ್ತಿದ್ದಾರೆ.


ಪ್ರಾಸಿಕ್ಯೂಷನ್ ವಿರುದ್ಧ ರಾಷ್ಟ್ರಮಟ್ಟದಲ್ಲಿ ಹೋರಾಟ ನಡೆಸಲು ಕಾಂಗ್ರೆಸ್‌ ವೇದಿಕೆ ಸಿದ್ಧಪಡಿಸುತ್ತಿದೆ. ಎಂತಹದೇ ಪರಿಸ್ಥಿತಿ ಬಂದರೂ ಹೈಕಮಾಂಡ್ ರಾಜೀನಾಮೆಗೆ ಸೂಚಿಸಬಾರದು ಎಂಬ ರೀತಿಯಲ್ಲಿ ಮನವರಿಕೆ ಮಾಡಿಕೊಡುವ ಲೆಕ್ಕಾಚಾರವನ್ನು ಸಿಎಂ ಕೂಡ ಹಾಕಿಕೊಂಡಿದ್ದಾರೆ. ಹೈಕಮಾಂಡ್ ಜೊತೆಗಿನ ಇಂದಿನ ಸಭೆ ಸಿದ್ದರಾಮಯ್ಯ ಪಾಲಿಗೆ ನಿರ್ಣಾಯಕವಾಗಿದೆ. ವಕೀಲರು ಎಐಸಿಸಿಯಿಂದಲೇ ಬಂದಿರುವುದರಿಂದ ದಾಖಲೆ ಸಹಿತ ಹೈಕಮಾಂಡ್‌ಗೆ ಮನವರಿಕೆ ಮಾಡಿಕೊಡುವ ಲೆಕ್ಕಾಚಾರವನ್ನು ಸಿದ್ದರಾಮಯ್ಯ ಹಾಕಿಕೊಂಡಿದ್ದಾರೆ.


ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ದೂರು ನೀಡಲು ಕಾಂಗ್ರೆಸ್‌ ನಾಯಕರು ಗುರುವಾರದ ಸಭೆಯಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ. ಹೈಕಮಾಂಡ್ ಅನುಮತಿಸಿದರೆ ಸಿಎಂ, ಡಿಸಿಎಂ ಡಿ.ಕೆ ಶಿವಕುಮಾರ್‌ ದಿನಾಂಕ ನಿಗದಿ ಮಾಡಿ ಎಲ್ಲ ಶಾಸಕರನ್ನ ದಿಲ್ಲಿಗೆ ಕರೆದೊಯ್ದು ರಾಷ್ಟ್ರಪತಿಗಳ ಮುಂದೆ ಪರೇಡ್ ಮಾಡಿಸುವ ಪ್ಲಾನ್‌ ಹಾಕಿಕೊಳ್ಳಲಾಗಿದೆ. ಈ ಮೂಲಕ ರಾಷ್ಟ್ರಪತಿಗಳ ಮುಂದೆ ಶಕ್ತಿ ಪ್ರದರ್ಶನ ಮಾಡಿ ನಮ್ಮದು ಬಹುಮತದ ಸರ್ಕಾರ ಎಂಬ ಸಂದೇಶ ರವಾನೆಗೆ ಕಸರತ್ತು ಮಾಡಲು ಸಿಎಂ ಮುಂದಾಗಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top