ಕಾರ್ಕಳ ಯುವತಿ ಮೇಲೆ ಅತ್ಯಾಚಾರ ಪ್ರಕರಣ | ಯುವತಿಯ ರಕ್ತ ಪರೀಕ್ಷೆಯಿಂದ ದೃಢಪಟ್ಟ ಮಾದಕ ವಸ್ತು ಸೇವನೆ

ಉಡುಪಿ : ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಯುವತಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರಕ್ಕೊಳಗಾಗಿರುವ ಸಂತ್ರಸ್ತ ಯುವತಿಯು ಘಟನೆ ವೇಳೆ ಮಾದಕ ವಸ್ತು ಸೇವಿಸಿರುವುದು ರಕ್ತ ಪರೀಕ್ಷೆಯಿಂದ ದೃಢಪಟ್ಟಿದೆ.

ಆದರೆ ಪ್ರಕರಣದಲ್ಲಿ ಬಂಧಿತ ಇಬ್ಬರು ಆರೋಪಿಗಳಾದ ಅಲ್ತಾಫ್ ಹಾಗೂ ಕ್ಷೇವಿಯರ್ ರಿಚರ್ಡ್ ರಕ್ತ ಪರೀಕ್ಷೆ ವರದಿ ನೆಗೆಟಿವ್ ಬಂದಿದೆ.

ಮೂರು ತಿಂಗಳ ಹಿಂದೆ ಇನ್ ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದ ಹಿಂದೂ ಯುವತಿಯನ್ನು ಭೇಟಿ ನೆಪದಲ್ಲಿ ಕರೆಸಿ ಬಿಯರ್‌ನಲ್ಲಿ ಮಾದಕ ವಸ್ತು ಬೆರಸಿ ಯುವತಿಗೆ ಕುಡಿಸಿ ಅತ್ಯಾಚಾರ ಮಾಡಿದ ಆರೋಪ ಕೇಳಿಬಂದಿತ್ತು. ಅದರಂತೆ ಆರೋಪಿ ಅಲ್ತಾಫ್ ಹಾಗೂ ಕ್ಷೇವಿಯರ್ ಎಂಬಿಬ್ಬರನ್ನು ಬಂಧಿಸಲಾಗಿತ್ತು. ಆಗ ಕಾರಿನಲ್ಲಿದ್ದ ಒಂದು ಪುಡಿಯನ್ನು ತೋರಿಸಿ, ಅದನ್ನು ಹುಡುಗಿ ಸೇವಿಸಿದ್ದಾಗಿ ಅಲ್ತಾಫ್ ತಿಳಿಸಿದ್ದ. ಅದರಂತೆ ಅ ಪುಡಿಯನ್ನು ಎಫ್‌ ಎಸ್‌ ಎಲ್‌ಗೆ ಕಳುಹಿಸಲಾಗಿದ್ದು, ಅಲ್ಲಿಂದ ಇನ್ನಷ್ಟೇ ಮಾಹಿತಿ ಬಹಿರಂಗವಾಗಬೇಕಿದೆ.





























 
 

ಪ್ರಕರಣದಲ್ಲಿ ಡ್ರಗ್ ಎಲ್ಲಿಂದ ಬಂದಿದೆ ಎಂಬ ಕುರಿತು ಪೂರ್ಣ ತನಿಖೆ ಮಾಡಿ ಆದಷ್ಟು ಬೇಗ ಈ ಪ್ರಕರಣ ಭೇದಿಸಲಾಗುವುದು.

 ಸಂತ್ರಸ್ತ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಲು ಬಾಕಿ ಇದ್ದು, ತನಿಖೆಯನ್ನು ಮುಕ್ತಾಯ ಗೊಳಿಸಲಾಗುವುದು ಎಂದು ಉಡುಪಿ ಜಿಲ್ಲಾ ಎಸ್ಪಿ ಅರುಣ್ ಕುಮಾರ್‌ ತಿಳಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top