ಮೂಡಬಿದ್ರೆ: ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಇತರ ಕಡೆಗಳಲ್ಲಿ ನೇರಪುಸಾರ ಮಾಡುತ್ತಿರುವ ಯೂಟೂಬ್ ಚಾನಲ್ ಗಳು ಗುಣಮಟ್ಟ ಹಾಗೂ ಏಕರೂಪದ ದರ ನಿಗದಿ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ, ಅಸೋಸಿಯೇಷನ್ ರಚಿಸುವ ಅವಶ್ಯಕತೆಯ ಉದ್ದೇಶಕ್ಕಾಗಿ ಮೂಡಬಿದಿರೆ ಕೋಟೆಬಾಗಿಲು ವೀರ ಮಾರುತಿ ದೇವಸ್ಥಾನದ ಸಭಾಂಗಣದಲ್ಲಿ ಇಂದು ಪೂರ್ವಭಾವಿ ಸಭೆ ಆಯೋಜಿಸಲಾಯಿತು.
ಸಭೆಯಲ್ಲಿ ಮುಂದಿನ ದಿನಗಳಲ್ಲಿ ಕಾರ್ಯಕ್ರಮದ ನೇರ ಪ್ರಸಾರವನ್ನು ಯಾವ ರೀತಿಯಲ್ಲಿ ಮಾಡಬಹುದು ಹಾಗೂ ಏಕರೂಪದ ದರ ನಿಗದಿ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ ಚರ್ಚೆ ನಡೆಯಿತು. ಜೊತೆಗೆ ನೇರಪ್ರಸಾರ ಮಾಡುತ್ತಿರುವ ಎಲ್ಲರನ್ನೂ ಒಂದೇ ವೇದಿಕೆಯಡಿಯಲ್ಲಿ ತಂದು ಸಂಘಟನೆ ಮಾಡುವ ಉದ್ದೇಶದಿಂದ ಅಸೋಸಿಯೇಷನ್ (ಸಂಘ). ಪದಾಧಿಕಾರಿಗಳ ಆಯ್ಕೆ ಮಾಡುವ ಬಗ್ಗೆ ಮಾತುಕತೆ ನಡೆಸಲಾಯಿತು.
ದ.ಕ. ಉಡುಪಿ ಹಾಗೂ ಇತರ ಕಡೆಗಳ ನೇರ ಪ್ರಸಾರ ಮಾಡುತ್ತಿರುವ ಆಸಕ್ತ ಚಾನೇಲ್ ನವರನ್ನೂ ಸೇರಿಸಿಕೊಂಡು ಮುಂದುವರಿಯುವ ಬಗ್ಗೆಯೂ ಮಾತುಕತೆ ನಡೆಸಲಾಯಿತು. ಸಭೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಸುಮಾರು 25 ಕ್ಕಿಂತಲೂ ಅಧಿಕ ಮಂದಿ ವಿವಿಧ ಯೂಟ್ಯೂಬ್ ಚಾನಲ್ ನ ಮುಖ್ಯಸ್ಥರು ಭಾಗವಹಿಸಿ ತಮ್ಮ
























