ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಕೆಸರ್‌ ಡೊಂಜಿ ದಿನ

ಸವಣೂರು: ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಯೋಜನೆ, ಕಲಾಸಂಘ ಹಾಗೂ ರೆಡ್ ಕ್ರಾಸ್ ಹಾಗೂ ಸವಣೂರು ಯುವಕ ಮಂಡಲದ ಜಂಟಿ ಆಶ್ರಯದಲ್ಲಿ ಕೆಸರ್ ಡೊಂಜಿ ದಿನ ಕೋಡಿಬೈಲ್‍ ಎಂಬಲ್ಲಿ ನಡೆಯಿತು.

ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಗಳಾದ ಇಂಜಿನಿಯರ್ ಅಶ್ವಿನ್ ಎಲ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ವೇದಿಕೆಯಲ್ಲಿ ವಿದ್ಯಾರಶ್ಮಿ

ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ  ಡಾ. ನಾರಾಯಣ ಮೂರ್ತಿ ಕೆ, ಉಪಪ್ರಾಂಶುಪಾಲ ಶೇಷಗಿರಿ ಎಂ, ಸವಣೂರು ಯುವಕ ಮಂಡಲದ ಅಧ್ಯಕ್ಷ ಜೀತಾಕ್ಷ ಜಿ, ಕಾರ್ಯದರ್ಶಿ ಕೀರ್ತನ್ ಕೋಡಿಬೈಲು, ಗದ್ದೆಯನ್ನು ನೀಡಿ ಸಹಕರಿಸಿದ ಮೀನಾಕ್ಷಿ ಕೋಡಿಬೈಲು ಉಪಸ್ಥಿತರಿದ್ದರು.





























 
 

ಕೆಸರ್ ಡೊಂಜಿ ದಿನ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡಾಕೂಟಗಳು ನಡೆಯಿತು. ತೃತೀಯ ಬಿ.ಎ. ವಿದ್ಯಾರ್ಥಿನಿ ಸ್ವಾತಿ ಸ್ವಾಗತಿಸಿ, ತೃತೀಯ ಬಿ.ಕಾಂ ವಿದ್ಯಾರ್ಥಿನಿ ಪಲ್ಲವಿ ವಂದಿಸಿದರು. ತೃತೀಯ  ಬಿ.ಸಿ.ಎ. ವಿದ್ಯಾರ್ಥಿನಿ ಲಾವಣ್ಯ ಕಾರ್ಯಕ್ರಮ ನಿರೂಪಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top