ದರ್ಶನ್‌ ಕೊಟ್ಟ ಮೂರೇ ಏಟಿಗೆ ರೇಣುಕಾಸ್ವಾಮಿ ಗೊಟಕ್‌

ದರ್ಶನ್‌ ಮತ್ತು ಗ್ಯಾಂಗ್‌ನ ಬರ್ಬರ ಕ್ರೌರ್ಯ ಬಿಚ್ಚಿಟ್ಟ ಚಾರ್ಜ್‌ಶೀಟ್‌

ಬೆಂಗಳೂರು: ಪೊಲೀಸರು ನಿನ್ನೆ ಕೋರ್ಟಿಗೆ ಸಲ್ಲಿಸಿರುವ ಪೂರಕ ಚಾರ್ಜ್‌ಶೀಟ್‌ ನಟ ದರ್ಶನ್ ಮತ್ತು ಗ್ಯಾಂಗ್‌ ನರಪೇತಲನಂತಿದ್ದ ಬಡಪಾಯಿ ರೇಣುಕಾಸ್ವಾಮಿಯ ಮೇಲೆ ಎಸಗಿದ ಮಾರಣಾಂತಿಕ ದೌರ್ಜನ್ಯದ ಕರಾಳ ಮುಖಗಳನ್ನು ಬಯಲುಗೊಳಿಸಿ ಬೆಚ್ಚಬೀಳಿಸಿದೆ. ಪವಿತ್ರಾ ಗೌಡ ಕುಮ್ಮಕ್ಕಿನಿಂದಲೇ ಕೊಲೆ ನಡೆದಿದ್ದರೂ ರೇಣುಕಾಸ್ವಾಮಿಗೆ ಮಾರಣಾಂತಿಕ ಏಟು ಕೊಟ್ಟದ್ದು ದರ್ಶನ್‌ ಎಂಬುದನ್ನು ಚಾರ್ಜ್‌ಶೀಟ್‌ನಲ್ಲಿ ವಿವರಿಸಲಾಗಿದೆ.


ರೇಣುಕಾಸ್ವಾಮಿ ಸಾವಿಗೆ ದರ್ಶನ್ ಹೊಡೆತವೇ ಕಾರಣವಾಯಿತು ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ರೇಣುಕಾಸ್ವಾಮಿ ಸಾಯುವ ಮುನ್ನ ದರ್ಶನ್ ಆತನಿಗೆ ಮೂರು ಹೊಡೆತಗಳನ್ನು ಕೊಟ್ಟಿದ್ದ. ಈ ಮೂರು ಹೊಡೆತಗಳೇ ರೇಣುಕಾಸ್ವಾಮಿಯ ಪ್ರಾಣ ಕಸಿದಿದೆ ಎಂದು ಪೊಲೀಸರು ಉಲ್ಲೇಖಿಸಿದ್ದಾರೆ.





























 
 


ರೇಣುಕಾಸ್ವಾಮಿ ಹತ್ಯೆಯಾದ ದಿನ ದರ್ಶನ್ 45 ನಿಮಿಷಗಳ ಕಾಲ ಪಟ್ಟಣಗೆರೆ ಶೆಡ್‌ನಲ್ಲಿದ್ದ. ಒಂದು ತಾಸಿಗೂ ಹೆಚ್ಚು ಹೊತ್ತು ದರ್ಶನ್‌ ಮತ್ತು ಗ್ಯಾಂಗ್‌ ರೇಣುಕಾಸ್ವಾಮಿಯನ್ನು ಮನಸೋಇಚ್ಚೆ ಥಳಿಸಿದೆ. ದರ್ಶನ್ ಕೊಟ್ಟ ಆ ಮೂರು ಹೊಡೆತಗಳು ರೇಣುಕಾಸ್ವಾಮಿಯ ಪ್ರಾಣ ಕಸಿದಿದೆ. 110 ಕೆಜಿಯ ದರ್ಶನ್ ನರಪೇತಲನಂತಿದ್ದ ರೇಣುಕಾಸ್ವಾಮಿ ಎದೆಗೆ ಶೂ ಕಾಲಿನಿಂದ ಒಂದೇ ಸಮನೆ ಒದ್ದಿದ್ದಾನೆ. ದರ್ಶನ್ ಮೊದಲ ಹೊಡೆತಕ್ಕೆ ರೇಣುಕಾಸ್ವಾಮಿಯ ಎದೆಯ ಮೂಳೆಗಳೆಲ್ಲ ಮುರಿದಿವೆ. ಎರಡನೇ ಬಾರಿ ದರ್ಶನ್, ರೇಣುಕಾಸ್ವಾಮಿಯನ್ನು ಸಿನಿಮೀಯ ಶೈಲಿಯಲ್ಲಿ ಎತ್ತಿ ಲಾರಿಗೆ ಎಸೆದಿದ್ದಾನೆ. ಎಸೆದ ರಭಸಕ್ಕೆ ರೇಣುಕಾಸ್ವಾಮಿ ತಲೆಗೆ ಗಂಭೀರ ಗಾಯವಾಗಿದೆ. ತಲೆ ಬುರುಡೆಗೆ ಏಟು ಬಿದ್ದು ರಕ್ತ ಹೆಪ್ಪುಗಟ್ಟಿದೆ. ಆಗಲೇ ರೇಣುಕಾಸ್ವಾಮಿ ಜೀವ ಹಾರಿಹೋಗಿತ್ತು ಎಂದು ಚಾರ್ಜ್‌ಶೀಟ್‌ನಲ್ಲಿ ಪೊಲೀಸರು ವಿವರಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top