ದ.ಕ ಜೇನು ವ್ಯವಸಾಯಗಾರರ ಸಹಕಾರ ಸಂಘದ ಮಹಾಸಭೆ | 32.40 ಕೋಟಿ ವ್ಯವಹಾರ, 10.02 ಲಕ್ಷ ಲಾಭ, ಶೇ.12 ಡಿವಿಡೆಂಡ್ ಘೋಷಣೆ

ಪುತ್ತೂರು: ದ.ಕ ಜೇನು ವ್ಯವಸಾಯಗಾರರ ಸಹಕಾರ ಸಂಘ 2023-24ನೇ ಸಾಲಿನಲ್ಲಿ 32.40 ಕೋಟಿ ವ್ಯವಹಾರ ನಡೆಸಿ 10.02 ಲಕ್ಷ ರೂ. ಲಾಭಗಳಿಸಿದೆ. ಲಾಭಾಂಶದಲ್ಲಿ ಸದಸ್ಯರಿಗೆ ಶೇ.12 ಡಿವಿಡೆಂಡ್ ವಿತರಿಸಲಾಗುವುದು ಎಂದು ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್ ವಾರ್ಷಿಕ ಮಹಾಸಭೆಯಲ್ಲಿ ಘೋಷಣೆ ಮಾಡಿದರು.

ಸಂಘದ ಪ್ರಧಾನ ಕಚೇರಿಯ ‘ಮಾಧುರಿ ಸೌಧ’ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಘೋಷಣೆ ಮಾಡಿದರು.

ವರದಿ ವರ್ಷ ಸಂಘದಲ್ಲಿ 3,030 ಸದಸ್ಯರಿಂದ 13.77 ಲಕ್ಷ ರೂ. ಪಾಲು ಬಂಡವಾಳ, 64.22 ಲಕ್ಷ ರೂ. ಕ್ಷೇಮನಿಧಿ, 57.17 ಲಕ್ಷ ರೂ. ಇತರ ನಿಧಿಗಳು ಹಾಗೂ 3.78 ಕೋಟಿ ಠೇವಣಾತಿಗಳನ್ನು ಹೊಂದಿದೆ. ರೈತರಿಂದ 1,07,391 ಕೆ.ಜಿ ಜೇನು ಖರೀದಿಸಿ, 1,03,002 ಕೆ.ಜಿ ಜೇನು ಮಾರಾಟ ಮಾಡಲಾಗಿದೆ. 2.74 ಕೋಟಿ ಜೇನು ವ್ಯವಹಾರ ಮಾಡಿ 85.27 ಲಕ್ಷ ಮಾರಾಟ ಲಾಭ ಗಳಿಸಿದೆ. ಲೆಕ್ಕ ಪರಿಶೋಧನೆಯಲ್ಲಿ ಸಂಘವು ‘ಎ’ ಶ್ರೇಣಿಯನ್ನು ಪಡೆದುಕೊಂಡಿದೆ. 2023-24ನೇ ಸಾಲಿನಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಸಾಧನಾ ಪ್ರಶಸ್ತಿ ಹಾಗೂ 10 ಸಾವಿರ ಮೌಲ್ಯದ ಪಾಲು ಪತ್ರ ನೀಡಿ ಗೌರವಿಸಿದೆ ಎಂದರು.





























 
 

ಸಂಘದ ತ್ರೈಮಾಸಿಕ ಪತ್ರಕೆ ಮಧುಪ್ರಪಂಚದ ಸಂಪಾದಕರಾಗಿರುವ ನಾರಾಯಣ ರೈಯವರನ್ನು ಸಭೆಯಲ್ಲಿ ಸನ್ಮಾನಿಸಲಾಯಿತು. ವರದಿ ವರ್ಷದಲ್ಲಿ ಸಂಘಕ್ಕೆ ಅತೀ ಹೆಚ್ಚು ಜೇನು ಪೂರೈಕೆ ಮಾಡಿದವರನ್ನು ಅಭಿನಂದಿಸಲಾಯಿತು.

ನಿರ್ದೇಶಕರಾದ ಜಿ.ಪಿ ಶ್ಯಾಮ ಭಟ್, ಜನಾರ್ದನ ಚೂಂತಾರು, ಡಿ.ತನಿಯಪ್ಪ, ಶ್ರೀಶ ಕೊಡವೂರು, ಎಚ್.ಸುಂದರ ಗೌಡ, ಇಂದಿರಾ ಕೆ., ಹರೀಶ್ ಕೋಡ್ಲ, ಪಾಂಡುರಂಗ ಹೆಗ್ಡೆ, ಪುರುಷೋತ್ತಮ ಭಟ್ ಎಂ., ಶಿವಾನಂದ, ಮನಮೋಹನ ಅರಂಬ್ಯ, ಪುಟ್ಟಣ್ಣ ಗೌಡ ಕೆ., ಗೋವಿಂದ ಭಟ್ ಪಿ., ಶಂಕರ ಪಿ., ಸರಸ್ವತಿ ವೈ.ಪಿ ಹಾಗೂ ಸುಶೀಲ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಿಬಂದಿ ದಕ್ಷಿತಾ ಪ್ರಾರ್ಥಿಸಿದರು. ವ್ಯವಸ್ಥಾಪನಾ ನಿರ್ದೇಶಕ ತಿಮ್ಮಯ್ಯ ಪಿ. ವರದಿ, ಲೆಕ್ಕಪತ್ರ ಮಂಡಿಸಿದರು. ಉಪಾಧ್ಯಕ್ಷ ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು ವಂದಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top