ನಾಗಮಂಗಲದಲ್ಲಿ ನಡೆದದ್ದು ಆಕಸ್ಮಿಕ ಘಟನೆ : ಗೃಹ ಸಚಿವರ ಹೇಳಿಕೆ

ಕೋಮುಗಲಭೆಯಾಗಿಲ್ಲ ಜನರು ಕಲ್ಲು ತೂರಿಕೊಂಡಿದ್ದಾರೆ ಎಂದು ತೇಲಿಸಿಬಿಟ್ಟ ಪರಮೇಶ್ವರ್‌

ಬೆಂಗಳೂರು : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಿನ್ನೆ ರಾತ್ರಿ ಗಣೇಶ ಮೆರವಣಿಗೆಯ ಮೇಲೆ ಮುಸ್ಲಿಮರು ಕಲ್ಲು ತೂರಿದ ಬಳಿಕ ಸ್ಫೋಟಗೊಂಡ ಗಲಭೆಯನ್ನು ಗೃಹ ಸಚಿವ ಜಿ.ಪರಮೇಶ್ವರ್‌ ಕೋಮುಗಲಭೆಯಲ್ಲ ಸಣ್ಣ ಘಟನೆ ಎಂದು ಬಣ್ಣಿಸಿ ಮತ್ತೆ ಬೇಜವಾಬ್ದಾರಿ ಮೆರೆದಿದ್ದಾರೆ.
ಕೋಮು ಗಲಭೆಯಾಗಿಲ್ಲ, ಆಕಸ್ಮಿಕ ಘಟನೆ ನಡೆದಿದೆ. ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟ ಆಗಿದೆ. ಅದು ಕೋಮು ಗಲಭೆ ಅಲ್ಲ, ಆಕಸ್ಮಿಕವಾಗಿ ನಡೆದಿರುವ ಘಟನೆ. ಒಬ್ಬರಿಗೊಬ್ಬರು ಘರ್ಷಣೆ ಮಾಡಿಕೊಂಡಿದ್ದಾರೆ ಎಂದು ಬೆಂಗಳೂರಿನಲ್ಲಿ ಪತ್ರಕರ್ತರ ಜೊತೆ ಮಾತನಾಡುವಾಗ ಹೇಳಿದ್ದಾರೆ.

ಗಲಾಟೆ ವೇಳೆ ಬೈಕ್​ಗಳು, ಅಂಗಡಿಗೆ ಬೆಂಕಿ ಹಾಕಿದ್ದಾರೆ. ಗಣೇಶ ವಿಸರ್ಜನೆ ವೇಳೆ ಯಾರೋ ಕಲ್ಲು ತೂರಾಟ ಮಾಡಿದ್ದಾರೆ. ಅದಕ್ಕೆ ಈ ಕಡೆಯಿಂದಲೂ ಕಲ್ಲು ತೂರಾಟ ಮಾಡಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಆಗಿಲ್ಲ. ಸದ್ಯ ಸ್ಥಳದಲ್ಲಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.





























 
 

ನಾಗಮಂಗಲ ಘಟನೆ ಸಂಬಂಧ ಸುಮಾರು 52 ಜನರನ್ನು ಬಂಧಿಸಲಾಗಿದೆ. ಕಲ್ಲು ತೂರಾಟ ವೇಳೆ ಒಬ್ಬ ಎಎಸ್​ಐಗೂ ಗಾಯವಾಗಿದೆ. ಈ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದು ಅವರು ಮನವಿ ಮಾಡಿದ್ದಾರೆ.
ಗಣೇಶ ವಿಸರ್ಜನೆ ವೇಳೆ ಗಲಭೆ ಪ್ರಕರಣ ಸಂಬಂಧ ನಾಗಮಂಗಲಕ್ಕೆ ಬಿಜೆಪಿ ನಾಯಕರ ನಿಯೋಗ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿ. ರಾಜಕೀಯ ಮಾಡಬೇಡಿ ಎಂದು ನಾನು ಬಿಜೆಪಿ ನಾಯಕರಲ್ಲಿ ಮನವಿ ಮಾಡುತ್ತೇನೆ. ಅವರು ಕಾನೂನಾತ್ಮಕವಾಗಿ ಸಲಹೆ ಕೊಡಲಿ. ಎಡಿಜಿಪಿ ಹೋಗಿದ್ದಾರೆ, ಅವಶ್ಯಕತೆ ಇದ್ದರೆ ನಾನು ಹೋಗುತ್ತೇನೆ ಎಂದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top