ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು | ಚಿನ್ನಾಭರಣ ಕಳವು

ವಿಟ್ಲ: ಮನೆಯೊಂದರ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದ ಘಟನೆ ವಿಟ್ಲ ಪಡೂರು ಗ್ರಾಮದ ಕುಂಟುಕುಡೇಲು ಎಂಬಲ್ಲಿ ನಡೆದಿದೆ.

ಈ ಕುರಿತು ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,

ವಿಟ್ಲಪಡೂರು ಗ್ರಾಮದ ಕುಂಟುಕುಡೇಲು ನಿವಾಸಿ ಲೀಲಾ ಕೆ. ದೂರು ನೀಡಿದ್ದರು.  ಸೆ.17ರಂದು ಬಂಟ್ವಾಳ ವಿಟ್ಲಪಡೂರು ಗ್ರಾಮದ ಕುಂಟುಕುಡೇಲು ಎಂಬಲ್ಲಿರುವ ನನ್ನ ಮನೆಯ ಬಾಗಿಲುಗಳನ್ನು ಭದ್ರಪಡಿಸಿ ಬೇರೆಡೆಗೆ ತೆರಳಿದ್ದ ಸಂದರ್ಭ ಮನೆಯ ಹಿಂಬಾಗಿಲನ್ನು ಮುರಿದು ಒಳಪ್ರವೇಶಿಸಿರುವುದು ಕಂಡುಬಂದಿತ್ತು. ಕೂಡಲೇ ಮನೆಯೊಳಗಡೆ ಪ್ರವೇಶಿಸಿ ನೋಡಿದಾಗ ಮನೆಯ ಕೋಣೆಯೊಂದರ ಕಪಾಟಿನ ಒಳಗಡೆ ಇರಿಸಿದ್ದ, ಒಟ್ಟು 36 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವುಗೈದಿರುವುದು ಬೆಳಕಿಗೆ ಬಂದಿದೆ.





























 
 

ಕಳವಾದ ಚಿನ್ನಾಭರಣಗಳ ಒಟ್ಟು ಮೌಲ್ಯ ರೂ 1,46,000 ಎಂದು ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ ಎನ್ನಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top