ದಾವಣಗೆರೆಯಲ್ಲೂ ಗಣೇಶ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ತೂರಾಟ

ದಾವಣಗೆರೆ: ದಾವಣಗೆರೆಯ ಬೇತೂರ ರಸ್ತೆಯ ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ನಡೆದಿದ್ದು, ಸರ್ಕಲ್ ಇನ್ಸ್‌ಪೆಕ್ಟರ್ ಗುರುಬಸವರಾಜ್ ಹಾಗೂ ಕ್ರೈಂ ವಿಭಾಗದ ಪೊಲೀಸ್ ಕಾನ್‌ಸ್ಟೆಬಲ್‌ ರಘು ಎಂಬವರಿಗೆ ಗಾಯವಾಗಿದೆ. ಕೂಡಲೇ ಕಾಂಗ್ರೆಸ್ ಮುಖಂಡ ಆಯೂಬ್ ಪೈಲ್ವಾನ್ ಸೇರಿದಂತೆ ಪ್ರಮುಖ ಮುಸ್ಲಿಂ‌ ನಾಯಕರು ಯುವಕರನ್ನು ನಿಯಂತ್ರಣ ಮಾಡಲು ಮುಂದಾಗಿದ್ದಾರೆ.

ಕಲ್ಲುತೂರಿದ ಆರೋಪಿಗಳಿಗೆ ಪೊಲೀಸರು ಶೋಧಕಾರ್ಯ ನಡೆಸಿದ್ದು, ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಕಲ್ಲು ತೂರಿದ ಕಿಡಿಗೇಡಿಗಳನ್ನು ಪೊಲೀಸರು ಓಡಿಸಿಕೊಂಡು ಹೋಗಿದ್ದು, ಸಿಸಿಟಿವಿ ದೃಶ್ಯ ಸಂಗ್ರಹಿಸಿ ಆರೋಪಿಗಳ ಪತ್ತೆ ಕಾರ್ಯ ನಡೆದಿದೆ. ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆ ಮಾಡಿಕೊಳ್ಳಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಅಂಗಡಿ‌ ಮುಗ್ಗಟ್ಟುಗಳನ್ನ ಪೊಲೀಸರು ಮುಚ್ಚಿಸಿದ್ದಾರೆ. ಶಾಂತಿ ಟಾಕೀಸ್ ರಸ್ತೆ ಹಾಗೂ ಎನ್‌.ಆರ್ ರಸ್ತೆಯಲ್ಲಿ ಬಿಗಿಪೊಲೀಸ್ ಬಂದೋಬಸ್ತು ಮಾಡಲಾಗಿದೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಎಸ್‌ಪಿ ಉಮಾ ಪ್ರಶಾಂತ್, ‘ಬೇತೂರ ರಸ್ತೆ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಆಗಿದೆ. ಇನ್ಸ್‌ಪೆಕ್ಟರ್, ಕಾನ್‌ಸ್ಟೆಬಲ್‌ಗೆ ಸಣ್ಣಪುಟ್ಟ ಗಾಯಗಳಾಗಿವೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ, ಆರೋಪಿಗಳ ಪತ್ತೆಗಾಗಿ ಕ್ರಮ ಕೈಗೊಂಡಿದ್ದೇವೆ. ನಿಷೇಧಾಜ್ಞೆ ಜಾರಿ ಬಗ್ಗೆ ಡಿಸಿ ಜೊತೆ ಚರ್ಚೆ ನಡೆಸಲಾಗಿದೆ. ಪ್ರಚೋದನಾತ್ಮಕ ಭಾಷಣವೇ ಗಲಾಟೆಗೆ ಕಾರಣವಾಗಿದೆ. ನಿನ್ನೆ ಒಂದು ಕೋಮಿನವರು ಪ್ರಚೋದನಾತ್ಮಕ ಹೇಳಿಕೆ ನೀಡಿದ್ದರು. ಇದಕ್ಕೆ ಇನ್ನೊಂದು ಕೋಮಿನವರು ವಿರೋಧ ವ್ಯಕ್ತಪಡಿಸಿದ್ದರು. ಎರಡೂ ಕಡೆಯವರಿಂದ ದೂರು ದಾಖಲಾಗಿದೆ, ಕ್ರಮಕೈಗೊಳ್ತೇವೆ ಎಂದರು.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top