ಸವಣಾಲು ಗ್ರಾಮದಲ್ಲಿ ಚಿರತೆ ಸೆರೆಯಾಗಿ ವಾರ ಕಳೆಯುವುದರೊಳಗೆ ಮತ್ತೊಂದು ಚಿರತೆ ಅರಣ್ಯ ಇಲಾಖೆಯ ಬೋನಿಗೆ

ಬೆಳ್ತಂಗಡಿ: ಸವಣಾಲು ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ  ಬೋನಿಗೆ ಚಿರತೆಯೊಂದು ಬಿದ್ದಿದ್ದು ಇದು ಈ ತಿಂಗಳಲ್ಲಿ ಬೋನಿಗೆ ಬಿದ್ದ ಎರಡನೇ ಚಿರತೆಯಾಗಿದೆ.

ಸವಣಾಲು ಗ್ರಾಮದ ಗುರಿಕಂಡ ಆನಂದ ಶೆಟ್ಟಿ ಎಂಬವರ ಮನೆ ಬಳಿ ಇರಿಸಲಾಗಿದ್ದ ಬೋನಿನೊಳಗೆ ಕಳೆದ ಮಧ್ಯರಾತ್ರಿ ಚಿರತೆ ಸೆರೆಯಾಗಿದೆ. ಕಳೆದ ಕೆಲವು ತಿಂಗಳುಳಿಂದ  ಗುರಿಕಂಡ ಪರಿಸರದಲ್ಲಿ ಚಿರತೆ ಹಾವಳಿಯಿಂದ ಕೋಳಿ ಸೇರಿದಂತೆ ಸಾಕು ಪ್ರ್ರಾಣಿಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದ ಮನೆಯವರು ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲಿಸಿ ಚಿರತೆಯನ್ನು ಸೆರೆ ಹಿಡಿಯುವುದಕ್ಕಾಗಿ ಬೋನ್ ಆಳವಡಿಸಿದ್ದರು. ಸುಮಾರು 3 ತಿಂಗಳ ನಂತರ ಸೆ.1 ರ ಮಧ್ಯರಾತ್ರಿ ಚಿರತೆ ಈ ಬೋನಿನೊಳಗೆ ಸೆರೆಯಾಗಿತ್ತು. ಅದನ್ನು ಸುರಕ್ಷಿತ ಸ್ಥಳಕ್ಕೆ ಬಿಡಲಾಗಿತ್ತು.

ಇದೀಗ ವಾರ ಕಳೆಯುವುದರೊಳಗೆ  ಮತ್ತೊಂದು ಚಿರತೆ  ಈ ಪರಿಸರದಲ್ಲಿ ಸುತ್ತಾಡಿದ್ದಲ್ಲದೇ ಮನೆಯ ಕೋಳಿಯನ್ನು ಹಿಡಿದಿತ್ತು. ಇದರಿಂದ ಮತ್ತಷ್ಟು ಆತಂಕಕ್ಕೊಳಗಾದ ಮನೆಯವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿ ಚಿರತೆ ಸೆರೆ ಹಿಡಿಯುವಂತೆ ಮನವಿ‌ ಮಾಡಿಕೊಂಡಿದ್ದರು. ಅದರಂತೆ ಮತ್ತೆ ಕಳೆದ ಒಂದು ವಾರಗಳ ಹಿಂದೆ  ಬೋನ್ ಅಳವಡಿಸಲಾಗಿತ್ತು.  ಸೆ 20ರ ಶುಕ್ರವಾರ  ಮಧ್ಯರಾತ್ರಿ ಸುಮಾರು 12 ಗಂಟೆ ಸುಮಾರಿಗೆ ಬೋನಿನೊಳಗೆ ಚಿರತೆ ಸೆರೆಯಾಗಿದೆ.ಈ ಬಗ್ಗೆ ಅರಣ್ಯ ಇಲಾಖೆಗೆ ಮನೆಯವರು ಮಾಹಿತಿ ನೀಡಿದ್ದು ಅಧಿಕಾರಿಗಳ ಬಂದು ಪರಿಶೀಲನೆ ನಡೆಸಿದ್ದಾರೆ.ಒಂದು ತಿಂಗಳಲ್ಲಿ ಎರಡು ಚಿರತೆಗಳು ಅರಣ್ಯ ಇಲಾಖೆಯ ಕಾರ್ಯಾಚರಣೆಯಲ್ಲಿ ಸೆರೆ ಸಿಕ್ಕಂತಾಗಿದೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top