ತೋಟದಲ್ಲಿ ಮಾಂಸಕ್ಕಾಗಿ ಅಕ್ರಮ ಗೋವಧೆ | ಐವರು ಆರೋಪಿಗಳು ಪರಾರಿ | ಸೊತ್ತುಗಳು ವಶಕ್ಕೆ | ಆರೋಪಿಗಳಿಗಾಗಿ ಶೋಧ ಕಾರ್ಯ

ಉಪ್ಪಿನಂಗಡಿ: ಅಕ್ರಮವಾಗಿ ತೋಟದಲ್ಲಿ ಗೋ ವಧೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಪೋಲಿಸರು ದಾಳಿ ನಡೆಸಿದ ಘಟನೆ 34 ನೇ ನೆಕ್ಕಿಲಾಡಿ ಗ್ರಾಮದ ಆದರ್ಶ ನಗರದ ಕಜೆ ಎಂಬಲ್ಲಿ ನಡೆದಿದ್ದು, ಐವರು ಆರೋಪಿಗಳು ಪರಾರಿಯಾದ ಘಟನೆ ನಡೆದಿದೆ.

ರಫಿಕ್, ನಝೀರ್, ಉಬೈದ್, ಅಶ್ರಫ್, ನಿಜಾಮುದ್ದೀನ್ ಪರಾರಿಯಾದವರು ಎಂದು ಗುರುತಿಸಲಾಗಿದೆ.

ಖತೀಜಮ್ಮ ಎಂಬವರ ಅಡಿಕೆ ತೋಟದಲ್ಲಿ ಅಕ್ರಮವಾಗಿ ಗೋ ವಧೆ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಅವಿನಾಶ್ ಹೆಚ್ ರವರು ಠಾಣಾ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿರುತ್ತಾರೆ. ಸ್ಥಳದಲ್ಲಿ 24 ಸಾವಿರ ರೂ. ಮೌಲ್ಯದ 96 ಕೆ.ಜಿ ದನದ ಮಾಂಸ, ದೇಹದ ಅಂಗಾಂಗಗಳು, ಮಾಂಸ ಮಾಡಲು ಬಳಸಿದ ಚೂರಿಗಳು, ಕಬ್ಬಿಣದ ಎಲೆಕ್ಟೋನಿಕ್ ತೂಕ ಮಾಪನ ಹಾಗು ಇತರ ಸೊತ್ತುಗಳು, 2 ಅಟೋರಿಕ್ಷಾಗಳು, 1 ಮೊಟಾರ್ ಸೈಕಲ್ ಪತ್ತೆಯಾಗಿದ್ದು, ಸೊತ್ತುಗಳನ್ನು ವಶಕ್ಕೆ ಪಡೆದು, ಆರೋಪಿಗಳ ವಿರುದ್ದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ: 107/2024 ಕಲಂ: 12 ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಮತ್ತು ಕಲಂ: 3(5) ಭಾರತೀಯ ನ್ಯಾಯ ಸಂಹಿತೆ ಯಂತೆ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳಿಗಾಗಿ ಪೋಲಿಸರು ಬಲೆಬೀಸಿದ್ದು, ಪತ್ತೆಗೆ ವಿಶೇಷ ತಂಡ ರಚಿಸಿ, ಶೋಧಕಾರ್ಯ ಆರಂಭಿಸಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top