ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಸಾಹಿತ್ಯ ಸಂಘದಿಂದ ಇಂಗ್ಲಿಷ್ ಸಂವಹನ ಕಾರ್ಯಗಾರ

ಸವಣೂರು: ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಸಾಹಿತ್ಯ ಸಂಘದ ವತಿಯಿಂದ ಇಂಗ್ಲಿಷ್ ಸಂವಹನ ಕಾರ್ಯಗಾರ ನಡೆಯಿತು.

ಕಾರ್ಯಗಾರವು 3 ಅವಧಿಯನ್ನು ಒಳಗೊಂಡಿದ್ದು ಸಂಪನ್ಮೂಲ ವ್ಯಕ್ತಿಗಳಾಗಿ ವಿವೇಕಾನಂದ ಕಾಲೇಜು ನಿವೃತ್ತ ಪ್ರಾಂಶುಪಾಲ ಡಾ.ಮಾದವ ಭಟ್, ಅಕ್ಷಯ ಕಾಲೇಜು ಇಂಗ್ಲೀಷ್ ಉಪನ್ಯಾಸಕಿ ರಶ್ಮಿ ಕೆ., ಕಬಕ ಸರಕಾರಿ ಪದವಿಪೂರ್ವ ಕಾಲೇಜು ನಿವೃತ್ತ ಉಪನ್ಯಾಸಕ ಚಂದ್ರಹಾಸ ರೈ ಬಿ. ಪಾಲ್ಗೊಂಡು ಫಂಕ್ಷನಲ್ ಇಂಗ್ಲಿಷ್, ಎಪ್ಲಿಕೇಷನ್‌ಆಫ್ ಕಮ್ಯುನಿಕೇಷನ್ ಹಾಗೂ ಕ್ರಿಯೇಟಿವಿಟಿ ಇನ್ ಕಮ್ಯುನಿಕೇಷನ್ ಎಂಬ ವಿಷಯಗಳ ಬಗ್ಗೆ ಕಾರ್ಯಾಗಾರ ನಡೆಸಿಕೊಟ್ಟರು.

ಕಾರ್ಯಗಾರವನ್ನು ಸಂಸ್ಥೆಯ ಪ್ರಾಂಶುಪಾಲ ಡಾ.ನಾರಾಯಣ ಮೂರ್ತಿ ಕೆ. ಉದ್ಘಾಟಿಸಿದರು. ಸಾಹಿತ್ಯ ಸಂಘದ ಸಂಘಟಕರಾದ ಶೇಷಗಿರಿ ಎಂ, ತೇಜಸ್ವಿ ಹಾಗೂ ವಿದ್ಯಾರ್ಥಿ ಸಂಘಟಕರಾದ ತೃತೀಯ ಬಿ.ಕಾಂ ವಿದ್ಯಾರ್ಥಿನಿ ಶ್ರಾವ್ಯವಾಣಿ, ದ್ವಿತೀಯ ಬಿ.ಸಿ.ಎ ವಿದ್ಯಾರ್ಥಿನಿ ಪ್ರಸ್ತುತಿ ಉಪಸ್ಥಿತರಿದ್ದರು. ಸಂಘದ ಸಂಘಟಕಿ ರಜನಿ ಸ್ವಾಗತಿಸಿ, ಪ್ರಥಮ ಬಿ.ಸಿ.ಎ ವಿದ್ಯಾರ್ಥಿ ಮಹಮ್ಮದ್ ಅನೀಸ್ ವಂದಿಸಿದರು. ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಅಲೀಮತ್ ಸಝಾನ ಕಾರ್ಯಕ್ರಮ ನಿರ್ವಹಿಸಿದರು. ಅಭೀಜ್ಞಾ, ಶ್ರಾವ್ಯವಾಣಿ ಪ್ರಾರ್ಥನೆ ಹಾಡಿದರು.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top