ಬಿಜೆಪಿ ಸವಣೂರು ಶಕ್ತಿ ಕೇಂದ್ರದಲ್ಲಿ ದೀನ್ ದಯಾಳ್‍ ಉಪಾಧ್ಯಾಯರ ಜನ್ಮ ದಿನಾಚರಣೆ

ಸವಣೂರು: ಬಿಜೆಪಿ ಸುಳ್ಯ ಮಂಡಲ ಸವಣೂರು ಶಕ್ತಿಕೇಂದ್ರ ಹಾಗೂ ಬೂತ್ ಸಮಿತಿ 66-ಮೊಗರು ಮತ್ತು ಬೂತ್ ಸಮಿತಿ-65 ಸವಣೂರು ಜಂಟಿ ಆಶ್ರಯದಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಯರ ಜನ್ಮದಿನಾಚರಣೆ ಸವಣೂರು ಯುವಕ ಮಂಡಲದ ಯುವ ಸಭಾಭವನದಲ್ಲಿ ಜರಗಿತು.

ಹಣ್ಣಿನ ಗಿಡ ನಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ಸಂಧರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಎಸ್.ಟಿ. ಮೋರ್ಚಾ ಅಧ್ಯಕ್ಷ ಗಂಗಾಧರ ಪೆರಿಯಡ್ಕ, ಸುಳ್ಯ ಮಂಡಲ ಸದಸ್ಯ ತಾರಾನಾಥ ಕಾಯರ್ಗ, ಸವಣೂರು ಶಕ್ತಿ ಕೇಂದ್ರದ ಅಧ್ಯಕ್ಷ ಚೇತನ್ ಕುಮಾರ್ ಕೊಡಿಬೈಲ್, ರೈತ ಉತ್ಪಾಧಕರ ಸಹಕಾರಿ ಸಂಘದ ನಿರ್ದೇಶಕ ಶ್ರೀಧರ ಸುಣ್ಣಾಜೆ, ಬೂತ್ ಸಮಿತಿ 65 ರ ಕಾರ್ಯದರ್ಶಿ ಸತೀಶ್ ಬಲ್ಯಾಯ, ಬೂತ್ ಸಮಿತಿ 66 ರ ಅಧ್ಯಕ್ಷ ರಾಜೇಶ್ ಇಡ್ಯಾಡಿ, ಸಾಮಾಜಿಕ ಮುಂದಾಳು ರಾಮಕೃಷ್ಣ ಪ್ರಭು, ಸವಣೂರು ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕರಾದ ಗಂಗಾಧರ ಸುಣ್ಣಾಜೆ, ಪ್ರೇಮಚಂದ್ರ ಮೆದು, ಕಾರ್ಯಕರ್ತರಾದ ಮಿಥುನ್ ಅಗರಿ ಉಪಸ್ಥಿತರಿದ್ದರು.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top