ಬಿಜೆಪಿ ಸವಣೂರು ಶಕ್ತಿಕೇಂದ್ರ-ಕುಟ್ರುಪ್ಪಾಡಿ ಮಹಾಶಕ್ತಿ ಕೇಂದ್ರದಿಂದ ಸ್ವಚ್ಛತಾ ಕಾರ್ಯಕ್ರಮ

ಸವಣೂರು: ಬಿಜೆಪಿ ಸವಣೂರು ಶಕ್ತಿ ಕೇಂದ್ರ, ಸುಳ್ಯ ಮಂಡಲ ಕುಟ್ರುಪ್ಪಾಡಿ ಮಹಾಶಕ್ತಿ ಕೇಂದ್ರದ ವತಿಯಿಂದ ಸೇವಾಪಾಕ್ಷಿಕ ಹಾಗೂ ಮೋದಿ ಜನ್ಮದಿನ  ಮತ್ತು ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಸವಣೂರಿನ ಕನಡಕುಮೇರುನಲ್ಲಿ ನಡೆಯಿತು.

ಶಕ್ತಿ ಕೇಂದ್ರದ ಕಾರ್ಯಕರ್ತರು ಸ್ಥಳೀಯ ಗಿಡ ಗಂಟಿಗಳನ್ನು ತೆರುವುಗೊಳಿಸುವ ಮೂಲಕ ಸ್ವಚ್ಛತಾ ಕಾರ್ಯ ನಡೆಸಿದರು.

ಈ ಸಂದರ್ಭಲ್ಲಿ ಬಿಜೆಪಿ ಸುಳ್ಯ ಮಂಡಲ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ, ಸುಳ್ಯ ಮಂಡಲ ಸದಸ್ಯ ತಾರಾನಾಥ ಕಾಯರ್ಗ, ಸುಳ್ಯ ಮಂಡಲ ಎಸ್. ಟಿ. ಮೋರ್ಚಾ ಅಧ್ಯಕ್ಷ ಗಂಗಾಧರ ಪೆರಿಯಡ್ಕ, ಸವಣೂರು ಶಕ್ತಿ ಕೇಂದ್ರ ಪ್ರಮುಖ ಚೇತನ್ ಕುಮಾರ್ ಕೋಡಿಬೈಲು, ಮಂಡಲ ಮಹಿಳಾ ಮೋರ್ಚಾ ಸದಸ್ಯೆ ಚಂದ್ರಾವತಿ ಸುಣ್ಣಾಜೆ, ಸವಣೂರು ಬಿಜೆಪಿ ಬೂತ್ ಸಂಖ್ಯೆ 65 ರ ಅಧ್ಯಕ್ಷ ತೀರ್ಥರಾಮ ಕೆಡೆಂಜಿ, ಪ್ರಧಾನ ಕಾರ್ಯದರ್ಶಿ ಸತೀಶ್ ಬಲ್ಯಾಯ, ಬೂತ್ 66ರ ಪ್ರಧಾನ ಕಾರ್ಯದರ್ಶಿ ಹಿತೇಶ್ ಮೆದು, ಪಾಲ್ತಾಡಿ ಬೂತ್ ಸಂಖ್ಯೆ 69 ರ ಅಧ್ಯಕ್ಷ ಸತೀಶ್ ಅಂಗಡಿಮೂಲೆ, ಸವಣೂರು ಯುವಕ ಮಂಡಲದ ಅಧ್ಯಕ್ಷ ಜಿತಾಕ್ಷ ಜಿ., ಕಾರ್ಯದರ್ಶಿ ಕೀರ್ತನ್ ಕೋಡಿಬೈಲು, ಮಾಜಿ ಅಧ್ಯಕ್ಷ ದಯಾನಂದ ಮೆದು, ಹಾಗೂ ಬಿಜೆಪಿ ಕಾರ್ಯಕರ್ತರು ಪ್ರಧಾನಿ ಸನ್ಮಾನ್ಯ ನರೇಂದ್ರ ಮೋದಿಯವರ ಸ್ವಚ್ಛತಾ ಅಭಿಯಾನದ ಕರೆಗೆ ಸಾಥ್ ನೀಡಿದರು.

































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top