ಪಾಕ್‌ ಪ್ರಜೆಗಳಿಗೆ ಬೆಂಗಳೂರಿನಲ್ಲಿ ನೆಲೆಸಲು ಸಹಾಯ ಮಾಡಿದ್ದವ ಸೆರೆ

ಧರ್ಮ ಪ್ರಚಾರಕ್ಕಾಗಿ ನುಸುಳಿ ಬರುತ್ತಿರುವ ಪಾಕಿಸ್ಥಾನಿಯರು

ಬೆಂಗಳೂರು: ಪಾಕಿಸ್ಥಾನಿ ಪ್ರಜೆಗಳಿಗೆ ಅಕ್ರಮವಾಗಿ ಭಾರತದೊಳಗೆ ನುಸುಳಿ ಬೆಂಗಳೂರಿನಲ್ಲಿ ನೆಲೆಸಲು ಸಹಾಯ ಮಾಡಿದ್ದ ಆರೋಪಿಯನ್ನು ಜಿಗಣಿ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶ ಮೂಲದ 55 ವರ್ಷದ ಪರ್ವೇಜ್​ ಅಹ್ಮದ್​​ ಬಂಧಿತ ವ್ಯಕ್ತಿ. ಹಿಂದೂ ಹೆಸರುಗಳನ್ನಿಟ್ಟುಕೊಂಡು ಬೆಂಗಳೂರಿನಲ್ಲಿ ನೆಲಸಿದ್ದ ಐದಕ್ಕೂ ಹೆಚ್ಚು ಮಂದಿ ಪಾಕಿಸ್ಥಾನಿ ಪ್ರಜೆಗಳನ್ನು ಕಳೆದ ವಾರ ಬೆಂಗಳೂರು ಪೊಲೀಸರು ಬಂಧಿಸಿದ್ದರು.

ಬೆಂಗಳೂರು ಹೊರವಲಯದ ಆನೆಕಲ್​ ತಾಲೂಕಿನ ಜಿಗಣಿಯಲ್ಲಿ ವಾಸವಾಗಿದ್ದ ರಷೀದ್​ ಅಲಿ ಸಿದ್ದಿಕಿ ಕುಟುಂಬ ಮತ್ತು ಪೀಣ್ಯದಲ್ಲಿ ವಾಸವಾಗಿದ್ದ ಕುಟುಂಬವನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಅಕ್ರಮವಾಗಿ ಭಾರತದ ಒಳಗೆ ನುಸುಳಿ, ಇಲ್ಲಿಯ ಆಧಾರ ಕಾರ್ಡ್​​, ಪ್ಯಾನ್​ ಕಾರ್ಡ್​ ಮತ್ತು ಪಾಸಪೋರ್ಟ್​​ ಮಾಡಿಸಿಕೊಂಡಿದ್ದಾರೆ.

































 
 

ಆರೋಪಿಗಳು ದಾಖಲಾತಿಗಳನ್ನು ಹೊಂದಲು ಸಹಾಯ ಮಾಡಿದವರನ್ನು ಪತ್ತೆ ಹಚ್ಚಲು ಜಿಗಣಿ ಪೊಲೀಸರು ಎರಡು ತಂಡಗಳಾಗಿ ಮುಂಬಯಿ ಮತ್ತು ದೆಹಲಿಗೆ ತೆರಳಿದ್ದರು. ಜಿಗಣಿ ಪೊಲೀಸರು ಪಾಕಿಸ್ಥಾನಿ ಪ್ರಜೆಗಳು ಭಾರತೀಯ ದಾಖಲಾತಿ ಹೊಂದಲು ಸಹಾಯ ಮಾಡಿದ ಪರ್ವೇಜ್​​ ಅಹ್ಮದ್​ನನ್ನು ಮುಂಬಯಿಯಲ್ಲಿ ಬಂಧಿಸಿದ್ದಾರೆ. ​​ಬಂಧಿತ ಆರೋಪಿಗಳು ಅಂತರಾಷ್ಟ್ರೀಯ ಮೆಹದಿ ಫೌಂಡೇಶನ್​ನೊಂದಿಗೆ ಸಂಪರ್ಕ ಹೊಂದಿದ್ದಾರೆ ಎನ್ನಲಾಗಿದೆ.

ಪರ್ವೇಜ್ 2007ರಿಂದ ಎಂ​ಎಫ್​ಐ ಜೊತೆ ಸಂಪರ್ಕ ಹೊಂದಿದ್ದಾನೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.
ಬಂಧಿತ ಪಾಕಿಸ್ಥಾನಿ ಪ್ರಜೆಗಳ ವಿಚಾರಣೆ ವೇಳೆ ಮತ್ತಷ್ಟು ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಪಾಕಿಸ್ಥಾನದಿಂದ 15ಕ್ಕೂ ಹೆಚ್ಚು ಮಂದಿ ಭಾರತಕ್ಕೆ ಅಕ್ರಮವಾಗಿ ನುಸುಳಿ ಬಂದಿರುವುದು ಗೊತ್ತಾಗಿದೆ. ಹದಿನೈದಕ್ಕೂ ಅಧಿಕ ಮಂದಿ ಮೆಹದಿ ಫೌಂಡೇಷನ್ ಸೇರಿದ್ದರು. ಇವರೆಲ್ಲ ಯೂನಸ್ ಅಲ್ಗೋರ್ ಧರ್ಮಗುರುಗಳ ಪರ ಪ್ರಚಾರಕ್ಕಾಗಿ ಆಗಮಿಸಿದ್ದಾರೆ ಎನ್ನಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top