ಉಪನ್ಯಾಸಕಿ, ಲೇಖಕಿ ಉಷಾ ಕೆ. ಅವರ ಕೃತಿ ‘ತೆರೆದ ಗವಾಕ್ಷಿ’ ಲೋಕಾರ್ಪಣೆ

ಪುತ್ತೂರು: ಕಳೆದ 35 ವರ್ಷಗಳಿಂದ ಉಪನ್ಯಾಸಕಿಯಾಗಿ ಸುದೀರ್ಘ ಸೇವೆಯನ್ನು ಸಲ್ಲಿಸಿ ನಿವೃತ್ತರಾದ ಉಷಾ ಕೆ.  ಅವರು ನಿರಂತರವಾಗಿ ಪತ್ರಿಕೆಗಳಲ್ಲಿ ಪ್ರಕಟಿಸುತ್ತಿದ್ದ ವೈಚಾರಿಕ – ಮಾನವೀಯ ಮೌಲ್ಯಗಳುಳ್ಳ ಲೇಖನಗಳ ಸಂಗ್ರಹ ‘ತೆರೆದ ಗವಾಕ್ಷಿ’ ಕೃತಿ ಪುತ್ತೂರಿನ ಅನುರಾಗ ವಠಾರದಲ್ಲಿ ಲೋಕಾರ್ಪಣೆಗೊಂಡಿತು.

ರಾಜೇಶ್‍ ಪವರ್ ಪ್ರೆಸ್ ಮಾಲಕ ರಘುನಾಥ ರಾವ್ ಕೃತಿ ಲೋಕಾರ್ಪಣೆ ಗೊಳಿಸಿದರು.

ಹಿರಿಯ ಸಾಹಿತಿ ನಾರಾಯಣ ರೈ ಕುಕ್ಕುವಳ್ಳಿ ಕೃತಿ ಕುರಿತು, ಸಾರಸ್ವತ ಸೌರಭದ ವ್ಯವಸ್ಥಾಪಕ ಸಂಪಾದಕ ಸುಳ್ಳಿ ರಾಧಾಕೃಷ್ಣ ನಾಯಕ್ ಕೃತಿಕಾರರ ಕುರಿತು  ಮಾತನಾಡಿದರು.

































 
 

ಹಿರಿಯ ಸಾಹಿತಿಗಳಾದ ವಿ.ಬಿ. ಆರ್ತಿ ಕಜೆ, ಕರ್ನಾಟಕ ಸಂಘದ ಅಧ್ಯಕ್ಷ ಬಿ. ಪುರಂದರ ಭಟ್, ಪತ್ರಕರ್ತ ಜಯಾನಂದ ಪೆರಾಜೆ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ  ಅಧ್ಯಕ್ಷ ಪುತ್ತೂರು ಉಮೇಶ್‍ ನಾಯಕ್, ಮತ್ತಿತರರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top