ಅ.18 : ಹಿಂದೂ ಹೆಣ್ಣು ಮಕ್ಕಳ ವಿರುದ್ಧ ನಾಲಿಗೆ ಹರಿಬಿಟ್ಟ ಸಂಜೀವ ಪೂಜಾರಿ ವಿರುದ್ಧ ಹಿಂದೂ ಜಾಗರಣ ವೇದಿಕೆಯಿಂದ ಬೃಹತ್‍ ಪ್ರತಿಭಟನೆ

ಪುತ್ತೂರು: ಬಿಲ್ಲವ ಸಮಾಜದ ಹೆಣ್ಣು ಮಕ್ಕಳ ವಿರುದ್ಧ ನಾಲಿಗೆ ಹರಿ ಬಿಟ್ಟ ಅರಣ್ಯ ಅಧಿಕಾರಿ ಸಂಜೀವ ಪೂಜಾರಿ ವಿರುದ್ದ ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲೆ ವತಿಯಿಂದ ಬೃಹತ್ ಪ್ರತಿಭಟನಾ ಸಭೆ ಅ.18 ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ನಡೆಯಲಿದೆ.

ದ.ಕ.ಜಿಲ್ಲೆಯಲ್ಲಿ ಒಂದು ಲಕ್ಷ ಪೂಜಾರಿ ಹೆಣ್ಣು ಮಕ್ಕಳು ಸೂಳೆಯರಾಗಿದ್ದಾರೆ. ಹಿಂದುತ್ವದ ಹುಡುಗರು ಇವರನ್ನು ಸೂಳೆ ಮಾಡಿದ್ದಾರೆ. ಭಜನೆ ಮಾಡಿ ರಾತ್ರಿ ಹೆಣ್ಣು ಮಕ್ಕಳನ್ನು ಮಲಗಿಸುವುದು ಹಿಂದೂ ಹುಡುಗರು ಸಂಜೀವ ಪೂಜಾರಿ ಎನ್ನಲಾದ ಆಡಿಯೋ ವೈರಲ್ ಆಗಿತ್ತು,

ಈ ಮಾತುಗಳು ಸಾಮಾಜಿಕ ಜಾಲಾತಾಣಗಳಲ್ಲಿ ವೈರಲ್ ಆಗಿದ್ದು ಹಿಂದು ಜಾಗರಣ ವೇದಿಕೆಯ ಗಮನಕ್ಕೆ ಬಂದ ಕೂಡಲೇ ಬೆಳ್ಳಾರೆ ಠಾಣೆಯಲ್ಲಿ ಮತ್ತು ಮಂಗಳೂರು ಅರಣ್ಯ ಅಧಿಕಾರಿ ಅಂತೋಣಿ ಮರಿಯಪ್ಪ ಇವರಿಗೆ ದೂರು ನೀಡಿದ್ದು ಪ್ರಕರಣ ದಾಖಾಲಾಗಿದೆ.





































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top