ಹಿಂದೂ ಹೆಣ್ಣುಮಕ್ಕಳ ಕುರಿತು ನಾಲಗೆ ಹರಿಬಿಟ್ಟ ಸಂಜೀವ ಪೂಜಾರಿ | ಹಿಂದೂ ಜಾಗರಣಾ ವೇದಿಕೆ ವತಿಯಿಂದ ಬೃಹತ್‍ ಪ್ರತಿಭಟನೆ | ಇಂದು ಸಂಜೆಯೊಳಗೆ ಸಂಜೀವ ಪೂಜಾರಿಯನ್ನು ಬಂಧಿಸದಿದ್ದರೆ ಮುಂದೆ ಆಗುವ ಅನಾಹುತಕ್ಕೆ ಪೊಲೀಸ್ ಇಲಾಖೆ ಹೊಣೆಯ ಎಚ್ಚರಿಕೆ

ಪುತ್ತೂರು: ಭಜನೆಯಲ್ಲಿ ಪಾಲ್ಗೊಂಡ ಒಂದು ಲಕ್ಷ ಮಹಿಳಾ ಬಿಲ್ಲವರು ವ್ಯಭಿಚಾರಿಗಳಾಗಿದ್ದಾರೆ ಎಂದು ಸಂಜೀವ ಪೂಜಾರಿ ವಿರುದ್ಧ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಡಿವೈಎಸ್‍ ಪಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು.

ಕಾರ್ಯಕರ್ತನೋರ್ವನ ಜೊತೆ ಮಾತನಾಡಿದ ಆಡಿಯೋ ಜಿಲ್ಲೆಯಾದ್ಯಂತ ವೈರಲ್ ಆದ ಪರಿಣಾಮ ಭಜನೆಯಲ್ಲಿ ಪಾಲ್ಗೊಂಡ ಒಂದು ಲಕ್ಷ ಬಿಲ್ಲವ ಯುವತಿಯರು ವ್ಯಭಿಚಾರಿಗಳಾಗಿದ್ದಾರೆ ಎನ್ನುವ ಮೂಲಕ ಕಿಚ್ಚು ಹಚ್ಚಿದ್ದರು. ಈ ಪರಿಣಾಮ ಕೆರಳಿರುವ ಹಿಂದೂ ಪರ ಸಂಘಟನೆಗಳು ಇಂದು ಪುತ್ತೂರಿನ ಡಿವೈಎಸ್ಪಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ, ತಕ್ಷಣ ಸಂಜೀವ ಪೂಜಾರಿಯನ್ನ ಬಂಧಿಸುವಂತೆ ಪಟ್ಟು ಹಿಡಿಸಿದರು. ಬಂಧಿಸುವವರೆಗೂ ನಾವು ಇಲ್ಲಿಂದ ಹೋಗಲ್ಲ ಎಂದು ಹಿಂದೂ ಸಂಘಟಕರು ಪೊಲೀಸ್ ಇಲಾಖೆಗೆ ಒತ್ತಡ ಹಾಕಿದ್ರು.

ಸಂಜೀವ ಪೂಜಾರಿ ವಿರುದ್ಧ ಈಗಾಗ್ಲೆ ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಾಗಿದೆ.  ಆದರೆ ಎಫ್ ಐಆರ್ ನಲ್ಲಿ ಕ್ಷುಲ್ಲಕ ಸೆಕ್ಷನ್ ಹಾಕಿದ್ದಾರೆಂದು ಹಿಂದೂ ಸಂಘಟನೆಗಳು ಆರೋಪ ಮಾಡಿದ್ದರು.



































 
 

 ಪ್ರತಿಭಟನಾ ನಿರತರ ಬಳಿ ಬಂದ ಡಿವೈಎಸ್ಪಿ ಅರುಣ್ ನಾಗೇಗೌಡ, ಸಂಜೀವ ಪೂಜಾರಿಯನ್ನ ಬಂಧಿಸುವ ಭರವಸೆ ನೀಡಿದರು. ಆದ್ರೂ ಪಟ್ಟು ಬಿಡದ ಹಿಂದೂ ಕಾರ್ಯಕರ್ತರು ಇಂದು ಸಂಜೆಯ ಒಳಗಡೆ ಬಂಧನ ಮಾಡಬೇಕು. ಇಲ್ಲದಿದ್ದಲ್ಲಿ ಸ್ವಯಂ ಪ್ರೇರಿತ ಬಂದ್ ನಡೆಸುವ ಕುರಿತು, ಮುಂದೆ ಆಗುವ ಅನಾಹುತಕ್ಕೆ ಇಲಾಖೆ ಹೊಣೆಯಾಗಲಿದೆ ಎಂಬ ಎಚ್ಚರಿಕೆಯನ್ನು ನೀಡಿದರು. ಬಳಿಕ ಪ್ರತಿಭಟನೆಯನ್ನು ಹಿಂಪಡೆದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top