ಕುರಿಯದಲ್ಲಿ ಅಶೋಕ ಜನ-ಮನ ಪ್ರಚಾರ ಸಭೆ

ಪುತ್ತೂರು: ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನ.2 ರಂದು ನಡೆಯುವ ಅಶೋಕ ಜನ-ಮನ ಕಾರ್ಯಕ್ರಮಕ್ಕೆ ಗ್ರಾಮದ ಪ್ರತೀಯೊಬ್ಬರೂ ಬಂದು ನಮ್ಮ ಆಶೀರ್ವಾದ ಮಾಡಬೇಕು ನಿಮ್ಮ ಆಗಮನವೇ ನಮಗೆ ದೊಡ್ಡ ಆಶೀರ್ವಾದ ಎಂದು ಟ್ರಸ್ಟ್‌ನ ಪ್ರಮುಖ ನಿಹಾಲ್ ಪಿ. ಶೆಟ್ಟಿ ಹೇಳಿದರು.

ಅವರು ಕುರಿಯ ಗ್ರಾಮದಲ್ಲಿ ನಡೆದ ಅಶೋಕ ಜನ ಮನ ಕಾರ್ಯಕ್ರಮದ ಪ್ರಚಾರ ಸಭೆ ಹಾಗೂ ಆಹ್ವಾನ ಸಮಾರಂಭದಲ್ಲಿ ಮಾತನಾಡಿದರು.

ಕಳೆದ ಹತ್ತು ವರ್ಷಗಳಿಗಿಂದ ಶಾಸಕರಾದ ಅಶೋಕ್ ರೈ ಅವರು ಪ್ರತೀ ವರ್ಷ ದೀಪಾವಳಿಯಂದು ವಸ್ತ್ರ ವಿತರಣೆ ಹಾಗೂ ಸಹಭೋಜನ ಕಾರ್ಯಕ್ರಮವನ್ನು ಏರ್ಪಡಿಸುತ್ತಿದ್ದಾರೆ. ಈ ಬಾರಿ ಸುಮಾರು 75 ಸಾವಿರಕ್ಕೂ ಮಿಕ್ಕಿ ಮಂದಿಗೆ ವಸ್ತ್ರದಾನ ಮಾಡುತ್ತಿದ್ದಾರೆ ಈ ಕಾರ್ಯಕ್ರಮದಲ್ಲಿ ಗ್ರಾಮದ ಮಹಿಳೆಯರು , ಮಕ್ಕಳು ಎಲ್ಲರೂ ಭಾಗವಹಿಸಬೇಕು ಎಂದು ಮನವಿ ಮಾಡಿದರು.



































 
 

ಶಿವರಾಮ ಆಳ್ವ ಮಾತನಾಡಿ, ಶಾಸಕರ ನೇತೃತ್ವದಲ್ಲಿ ನಡೆಯುವ ಜನ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಮನವಿ ಮಾಡಿದರು.

ಈ ಸಂದರ್ಬದಲ್ಲಿ ಸನತ್ ರೈ ಕುರಿಯ, ಗ್ರಾಪಂ ಸದಸ್ಯ ಯಾಕೂಬ್ ಕುರಿಯ, ಶಿವನಾಥ ರೈ ಮೇಗಿನಗುತ್ತು, ಗ್ರಾಪಂ ಸದಸ್ಯರಾದ ನೇಮಾಕ್ಷ ಸುವರ್ಣ ಮಗಿರೆ ಸೇರಿದಂತೆ ಗ್ರಾಮಸ್ಥರು ಹಾಗೂ ಕಾಲನಿ ನಿವಾಸಿಗಳು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top